ಮೈಸೂರು

ಒಳಮೀಸಲಾತಿ ಅನ್ಯಾಯ ಸರಿಪಡಿಸಲು ಆಗ್ರಹ

ಮೈಸೂರು : ಪರಿಶಿಷ್ಟ ಜಾತಿಯ ವೈಜ್ಞಾನಿಕ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿ ತಡೆಹಿಡಿದು, ತಕ್ಷಣವೇ ಉಪ-ಸಮಿತಿ ನೇಮಿಸಿ ಹೊಲೆಯ(ಬಲಗೈ) ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಗಾಂಧಿನಗರ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಕುರಿತು ಸರ್ಕಾರಕ್ಕೆ ಸಲ್ಲಿಸಿರುವ ವರದಿಯ ಪ್ರಮುಖ ಅಂಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೈಜ್ಞಾನಿಕ ವಾಗಿ ಒಳ ಮೀಸಲಾತಿ ವರ್ಗೀಕರಣ ಮಾಡುವ ಬದಲು ಆರ್ಥಿಕ ಮತ್ತು ರಾಜಕೀಯ ಅಂಶಗಳನ್ನು ಸೇರಿಸಿ ಕೊಂಡು ಅವೈಜ್ಞಾನಿಕವಾಗಿ ದೋಷಪೂರಿತ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ 101 ಜಾತಿಗಳನ್ನು ವರ್ಗೀಕರಣ ಮಾಡಲಾಗಿದೆ. ಹೊಲೆಯ ಮತ್ತು ಅದೇ ರೀತಿಯ ಸಾಮಾಜಿಕ ಅಂಶಗಳನ್ನು ಒಳಗೊಂಡ ಕೆಲವು ಜಾತಿಗಳನ್ನು ಪ್ರವರ್ಗ-ಸಿನಲ್ಲಿ ಇರಿಸಿ ಇದೇ ಸಾಮಾಜಿಕ ಅಂಶಗಳನ್ನು ಒಳಗೊಂಡ ಹೊಲೆಯ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಬಿ ಅಂದರೆ, ಮಾದಿಗ ಸಂಬಂಧಿತ ಜಾತಿಗಳ ಪೆಟ್ಟಿಗೆ ಸೇರಿಸಿ ಈ ಮೂಲಕ ಹೊಲೆಯ ಸಂಬಂಧಿತ ಜಾತಿಗಳ ಸಂಖ್ಯೆ ಯನ್ನು ಕಡಿಮೆ ಬರುವಂತೆ ಮಾಡಿ ಒಳ ಮೀಸಲಾತಿ ವರ್ಗಿಕರಣದ ಹೆಸರಿನಲ್ಲಿ ಅನ್ಯಾಯವೆಸಗಿದ್ದಾರೆ ಎಂದು ಕಿಡಿಕಾರಿದರು.

ಪ್ರವರ್ಗ-ಇ ಎಂಬ ವರ್ಗವನ್ನು ಮಾಡಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂಬ ಹೆಸರಿನ ಜಾತಿ ಸೂಚಕ ಗುಂಪುಗಳನ್ನು ಸೃಷ್ಟಿಸಿ ಈ ಮೂಲಕ ಹೊಲೆಯ ಸಮುದಾಯದಿಂದ ಆದಿ ಕರ್ನಾಟಕದಲ್ಲಿ ಗುರುತಿಸಿಕೊಂಡಿರುವ ಬಲಗೈ ಸಮುದಾಯವನ್ನು ಪ್ರತ್ಯೇಕಿಸಿ ಇಲ್ಲಿಯೂ ಹೊಲೆಯ(ಬಲಗೈ) ಸಮುದಾಯವನ್ನು ವಂಚಿಸಲಾಗುತ್ತಿದೆ. ವೈಜ್ಞಾನಿಕ ವರ್ಗೀಕರಣದ ಹೆಸರಿನಲ್ಲಿ ಹೊಲೆಯ ಸಂಬಂಧಿತ ಜಾತಿಗಳನ್ನು ಮಾದಿಗ ಸಂಬಂಧಿತ ಜಾತಿಗಳ ಪಟ್ಟಿಗೆ ಸೇರ್ಪಡೆ ಮಾಡಿರುವುದು ಸಾಮಾಜಿಕ ನ್ಯಾಯದ ಮೂಲತತ್ವಕ್ಕೆ ವಿರುದ್ಧವಾಗಿದೆ. ಪ್ರವರ್ಗ-ಎ ಅಡಿಯಲ್ಲಿ 51 ಜಾತಿಗಳನ್ನು ನಮೂದಿಸಿದ್ದು, ಹೊಲೆಯ ಸಂಬಂಧಿತ ಸಮುದಾಯದ ಜನಸಂಖ್ಯೆ ಕಡಿಮೆಯಾಗುವಂತೆ ಮಾಡಿ ಆ ಮೂಲಕ ಒಳ ಮೀಸಲಾತಿ ವೈಜ್ಞಾನಿಕ ವರ್ಗೀಕರಣದ ಹೆಸರಿನಲ್ಲಿ ಹೊಲೆಯ ಸಮುದಾಯವನ್ನು ವಂಚಿಸಿದ್ದಾರೆ ಎಂದು ದೂರಿದರು.

ಕರ್ನಾಟಕ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್, ಮಾಜಿ ಮಹಾಪೌರ ಪುರುಷೋತ್ತಮ್, ಅಶೋಕಪುರಂ ಪೈ.ಕೃಷ್ಣ, ಸಿದ್ದಸ್ವಾಮಿ, ಎಂ.ವಿ.ಚಂದ್ರಶೇಖರ್, ವಿಷ್ಣುವರ್ಧನ, ಚೇತನ್, ಎ.ಆರ್.ಕಾಂತರಾಜ್, ಡಾ.ಮರಿದೇವಯ್ಯ, ಹರಿಹರ ಆನಂದಸ್ವಾಮಿ, ನಾಗವಾಲ ನರೇಂದ್ರ, ಚಂದ್ರಶೇಖರಯ್ಯ, ಸಿದ್ದಪ್ಪ, ಶಂಕರ್, ಭರತ್, ಪುಟ್ಟಯ್ಯ, ಅಶೋಕಪುರಂ ಮಹೇಶ್, ಹನಸೋಗೆ ನಾಗರಾಜು, ಕಿರಣ್, ಆನಂದ್, ನಂಜುಂಡಸ್ವಾಮಿ, ಶಿವಶಂಕರ್, ಗಂಗಾಧರ್, ಪ್ರಭು, ದಿಲೀಪ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago