ಮೈಸೂರು

ಕುಕ್ಕರಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ಮಲಿನ ನೀರು ತಡೆಗಟ್ಟುವಂತೆ ಒತ್ತಾಯ

ಮೈಸೂರು : ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ಮಲಿನ ನೀರು ಸೇರುತ್ತಿರುವುದನ್ನು ತಡೆಗಟ್ಟುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರು ಘಟಕ, ಮೈಸೂರು ನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಒತ್ತಾಯಿಸಿದೆ.

ಮೈಸೂರಿನ ಗ್ರಾಹಕ ಪರಿಷತ್ ಮನವಿ ಮೇರೆಗೆ ೨೦೨೫ರ ಏ.೧೯ರಂದು ಕುಕ್ಕರಹಳ್ಳಿ ಕೆರೆಗೆ ತೆರಳಿ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಮೈಸೂರು-ಹುಣಸೂರು ರಸ್ತೆಯ ಪಡುವಾರಹಳ್ಳಿ ಕಡೆಯಿಂದ ಕೆರೆಗೆ ಸೇರುವ ಮಲಿನ ನೀರು, ರಂಗಾಯಣ ಕಡೆಯ ಕೆರೆ ನೀರು, ಯುಜಿಸಿ ಅಕಾಡೆಮಿ ತರಬೇತಿ ಸಂಸ್ಥೆ ಭಾಗದಲ್ಲಿ ಪ್ರತ್ಯೇಕವಾಗಿ ಕೆರೆ ನೀರು ಸಂಗ್ರಹಿಸಿ ಪರೀಕ್ಷಿಸಿದಾಗ ‘ಡಿ‌ʼ ವರ್ಗಿಕರಣ ಎಂದು ನಮೂದಾಗಿದೆ. ಬೋಟಿಂಗ್ ಪಾಯಿಂಟ್ ಹಾಗೂ ಪೂರ್ಣಯ್ಯ ನಾಲೆ ಸೇರುವ ಜಾಗದಲ್ಲಿ(ಪಂಪ್‌ಹೌಸ್ ಬಳಿ) ಕೆರೆ ನೀರು ಸಂಗ್ರಹಿಸಿ ಪರೀಕ್ಷಿಸಿದಾಗ ‘ಸಿʼ ವರ್ಗಿಕರಣ ಎಂದು ನಮೂದಾಗಿದೆ ಎಂದು ಮಾಲಿನ್ಯ ಮಂಡಳಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ನಿಸರ್ಗದಲ್ಲಿ ದೊರೆಯುವ ನೀರನ್ನು ಸಂಗ್ರಹಿಸಿ ಬಳಕೆಗೆ ಯೋಗ್ಯವೇ ಎಂದು ವರ್ಗೀಕರಿಸಿದಾಗ, ಸಾಂಪ್ರದಾಯಿಕವಾಗಿ ಸಂಸ್ಕರಿಸದೆ ಸೋಂಕು ನಿವಾರಿಸಿದ ನಂತರ ಕುಡಿಯುವ ನೀರಿನ ಮೂಲವನ್ನಾಗಿ (‘ಎʼ ವರ್ಗಿಕರಣ) ಬಳಸವುದು. ‘ಬಿʼ ವರ್ಗೀಕರಣ ಎಂದಿದ್ದರೆ ನೀರನ್ನು ವ್ಯವಸ್ಥಿತವಾಗಿ ಸ್ನಾನಕ್ಕೆ ಉಪಯೋಗಿಸುವುದು(‘ಬಿ ವರ್ಗಿಕರಣ). ನೀರನ್ನು ಸಂಸ್ಕರಿಸಿ ಹಾಗೂ ಸೋಂಕು ನಿವಾರಿಸಿದ ನಂತರ(ಸಿ ವರ್ಗಿಕರಣ) ಕುಡಿಯುವ ನೀರಿನ ಮೂಲವನ್ನಾಗಿ ಬಳಸಬಹುದು. ನೀರನ್ನು ವರ್ಗೀಕರಿಸಿದಾಗ ‘ಡಿʼ ವರ್ಗಿಕರಣ ಎಂದು ನಮೂದಾದರೆ ಮೀನುಗಾರಿಕೆ ಮತ್ತು ವನ್ಯಜೀವಿಗಳ ಬಳಕೆಗೆ ಯೋಗ್ಯ. ನೀರನ್ನು ವರ್ಗೀಕಸಿದಾಗ ‘ಇ ವರ್ಗೀಕರಣ ಎಂದು ನಮೂದಾದರೆ ನಿಯಂತ್ರಿತ ವಿಲೇವಾರಿ, ಕೈಗಾರಿಕಾ ಶೀತಲೀಕರಣ ಹಾಗೂ ವ್ಯವಸ್ಥಾಯಕ್ಕೆ ಉಪಯೋಗಸುವ ನೀರಿನ ಮೂಲವನ್ನಾಗಿ ಬಳಕೆ ಮಾಡಬಹುದು.

ಈ ವಿಶ್ಲೇಷಣಾ ವರದಿ ಅನ್ವಯ, ವಿವಿಧೆಡೆಯಿಂದ ತಾಜ್ಯ ಮಲಿನ ನೀರು ಕೆರೆಗೆ ಸೇರುತ್ತಿರುವುದರಿಂದ ಕುಕ್ಕರಹಳ್ಳಿ ಕೆರೆಯ ನೀರಿನ ಗುಣಮಟ್ಟದ ಮಾದರಿಯನ್ನು ವಿಶ್ಲೇಷಣೆ ಮಾಡಿದಾಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನೀರಿನ ವರ್ಗೀಕರಣದನ್ವಯ ಕೆಲವೊಮ್ಮೆ ‘ಡಿ ಮತ್ತು ‘ಸಿ ನಲ್ಲಿ ವರ್ಗೀಕರಿಸಲಾಗಿದೆ. ಕಲುಷಿತ ನೀರು ಕೆರೆಗೆ ಸೇರುವುದರಿಂದ ಕೆರೆ ನೀರಿನ ಗುಣಮಟ್ಟವು ದಿನೇದಿನೆ ಕುಂದುತ್ತಿರುವುದರಿಂದ ತ್ಯಾಜ್ಯ ಮಲಿನ ನೀರು ಕೆರೆಗೆ ಸೇರದಂತೆ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ನೀರು ಸೇರಿ ಮಲಿನವಾಗುವ ಕುರಿತು ಪರೀಕ್ಷೆಗೆ ಎಂಜಿಪಿ ೨೦೨೫ರ ಏ.೧೫ರಂದು ಒತ್ತಾಯಿಸಿತ್ತು. ಕ್ರಮೇಣ ಏ.೧೬ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕೆರೆ ನೀರಿ ಮಾದರಿ ಸಂಗ್ರಹ. ಏ.೧೯ರಂದು ಕುಕ್ಕರಹಳ್ಳಿ ಕೆರೆ ಮಲಿನ ನೀರು ತಡೆಗಟ್ಟುವಂತೆ ವಿಶ್ಲೇಷಣಾ ವರದಿಯನ್ನು ಪಾಲಿಕೆ ಆಯುಕ್ತರಿಗೆ ಸಲ್ಲಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

5 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

6 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

6 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

7 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

8 hours ago