ಮೈಸೂರು

ಕುಕ್ಕರಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ಮಲಿನ ನೀರು ತಡೆಗಟ್ಟುವಂತೆ ಒತ್ತಾಯ

ಮೈಸೂರು : ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ಮಲಿನ ನೀರು ಸೇರುತ್ತಿರುವುದನ್ನು ತಡೆಗಟ್ಟುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರು ಘಟಕ, ಮೈಸೂರು ನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಒತ್ತಾಯಿಸಿದೆ.

ಮೈಸೂರಿನ ಗ್ರಾಹಕ ಪರಿಷತ್ ಮನವಿ ಮೇರೆಗೆ ೨೦೨೫ರ ಏ.೧೯ರಂದು ಕುಕ್ಕರಹಳ್ಳಿ ಕೆರೆಗೆ ತೆರಳಿ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಮೈಸೂರು-ಹುಣಸೂರು ರಸ್ತೆಯ ಪಡುವಾರಹಳ್ಳಿ ಕಡೆಯಿಂದ ಕೆರೆಗೆ ಸೇರುವ ಮಲಿನ ನೀರು, ರಂಗಾಯಣ ಕಡೆಯ ಕೆರೆ ನೀರು, ಯುಜಿಸಿ ಅಕಾಡೆಮಿ ತರಬೇತಿ ಸಂಸ್ಥೆ ಭಾಗದಲ್ಲಿ ಪ್ರತ್ಯೇಕವಾಗಿ ಕೆರೆ ನೀರು ಸಂಗ್ರಹಿಸಿ ಪರೀಕ್ಷಿಸಿದಾಗ ‘ಡಿ‌ʼ ವರ್ಗಿಕರಣ ಎಂದು ನಮೂದಾಗಿದೆ. ಬೋಟಿಂಗ್ ಪಾಯಿಂಟ್ ಹಾಗೂ ಪೂರ್ಣಯ್ಯ ನಾಲೆ ಸೇರುವ ಜಾಗದಲ್ಲಿ(ಪಂಪ್‌ಹೌಸ್ ಬಳಿ) ಕೆರೆ ನೀರು ಸಂಗ್ರಹಿಸಿ ಪರೀಕ್ಷಿಸಿದಾಗ ‘ಸಿʼ ವರ್ಗಿಕರಣ ಎಂದು ನಮೂದಾಗಿದೆ ಎಂದು ಮಾಲಿನ್ಯ ಮಂಡಳಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ನಿಸರ್ಗದಲ್ಲಿ ದೊರೆಯುವ ನೀರನ್ನು ಸಂಗ್ರಹಿಸಿ ಬಳಕೆಗೆ ಯೋಗ್ಯವೇ ಎಂದು ವರ್ಗೀಕರಿಸಿದಾಗ, ಸಾಂಪ್ರದಾಯಿಕವಾಗಿ ಸಂಸ್ಕರಿಸದೆ ಸೋಂಕು ನಿವಾರಿಸಿದ ನಂತರ ಕುಡಿಯುವ ನೀರಿನ ಮೂಲವನ್ನಾಗಿ (‘ಎʼ ವರ್ಗಿಕರಣ) ಬಳಸವುದು. ‘ಬಿʼ ವರ್ಗೀಕರಣ ಎಂದಿದ್ದರೆ ನೀರನ್ನು ವ್ಯವಸ್ಥಿತವಾಗಿ ಸ್ನಾನಕ್ಕೆ ಉಪಯೋಗಿಸುವುದು(‘ಬಿ ವರ್ಗಿಕರಣ). ನೀರನ್ನು ಸಂಸ್ಕರಿಸಿ ಹಾಗೂ ಸೋಂಕು ನಿವಾರಿಸಿದ ನಂತರ(ಸಿ ವರ್ಗಿಕರಣ) ಕುಡಿಯುವ ನೀರಿನ ಮೂಲವನ್ನಾಗಿ ಬಳಸಬಹುದು. ನೀರನ್ನು ವರ್ಗೀಕರಿಸಿದಾಗ ‘ಡಿʼ ವರ್ಗಿಕರಣ ಎಂದು ನಮೂದಾದರೆ ಮೀನುಗಾರಿಕೆ ಮತ್ತು ವನ್ಯಜೀವಿಗಳ ಬಳಕೆಗೆ ಯೋಗ್ಯ. ನೀರನ್ನು ವರ್ಗೀಕಸಿದಾಗ ‘ಇ ವರ್ಗೀಕರಣ ಎಂದು ನಮೂದಾದರೆ ನಿಯಂತ್ರಿತ ವಿಲೇವಾರಿ, ಕೈಗಾರಿಕಾ ಶೀತಲೀಕರಣ ಹಾಗೂ ವ್ಯವಸ್ಥಾಯಕ್ಕೆ ಉಪಯೋಗಸುವ ನೀರಿನ ಮೂಲವನ್ನಾಗಿ ಬಳಕೆ ಮಾಡಬಹುದು.

ಈ ವಿಶ್ಲೇಷಣಾ ವರದಿ ಅನ್ವಯ, ವಿವಿಧೆಡೆಯಿಂದ ತಾಜ್ಯ ಮಲಿನ ನೀರು ಕೆರೆಗೆ ಸೇರುತ್ತಿರುವುದರಿಂದ ಕುಕ್ಕರಹಳ್ಳಿ ಕೆರೆಯ ನೀರಿನ ಗುಣಮಟ್ಟದ ಮಾದರಿಯನ್ನು ವಿಶ್ಲೇಷಣೆ ಮಾಡಿದಾಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನೀರಿನ ವರ್ಗೀಕರಣದನ್ವಯ ಕೆಲವೊಮ್ಮೆ ‘ಡಿ ಮತ್ತು ‘ಸಿ ನಲ್ಲಿ ವರ್ಗೀಕರಿಸಲಾಗಿದೆ. ಕಲುಷಿತ ನೀರು ಕೆರೆಗೆ ಸೇರುವುದರಿಂದ ಕೆರೆ ನೀರಿನ ಗುಣಮಟ್ಟವು ದಿನೇದಿನೆ ಕುಂದುತ್ತಿರುವುದರಿಂದ ತ್ಯಾಜ್ಯ ಮಲಿನ ನೀರು ಕೆರೆಗೆ ಸೇರದಂತೆ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ನೀರು ಸೇರಿ ಮಲಿನವಾಗುವ ಕುರಿತು ಪರೀಕ್ಷೆಗೆ ಎಂಜಿಪಿ ೨೦೨೫ರ ಏ.೧೫ರಂದು ಒತ್ತಾಯಿಸಿತ್ತು. ಕ್ರಮೇಣ ಏ.೧೬ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕೆರೆ ನೀರಿ ಮಾದರಿ ಸಂಗ್ರಹ. ಏ.೧೯ರಂದು ಕುಕ್ಕರಹಳ್ಳಿ ಕೆರೆ ಮಲಿನ ನೀರು ತಡೆಗಟ್ಟುವಂತೆ ವಿಶ್ಲೇಷಣಾ ವರದಿಯನ್ನು ಪಾಲಿಕೆ ಆಯುಕ್ತರಿಗೆ ಸಲ್ಲಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

8 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

9 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

9 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

9 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

10 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

10 hours ago