ಮೈಸೂರು

ಕುಕ್ಕರಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ಮಲಿನ ನೀರು ತಡೆಗಟ್ಟುವಂತೆ ಒತ್ತಾಯ

ಮೈಸೂರು : ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ಮಲಿನ ನೀರು ಸೇರುತ್ತಿರುವುದನ್ನು ತಡೆಗಟ್ಟುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರು ಘಟಕ, ಮೈಸೂರು ನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಒತ್ತಾಯಿಸಿದೆ.

ಮೈಸೂರಿನ ಗ್ರಾಹಕ ಪರಿಷತ್ ಮನವಿ ಮೇರೆಗೆ ೨೦೨೫ರ ಏ.೧೯ರಂದು ಕುಕ್ಕರಹಳ್ಳಿ ಕೆರೆಗೆ ತೆರಳಿ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಮೈಸೂರು-ಹುಣಸೂರು ರಸ್ತೆಯ ಪಡುವಾರಹಳ್ಳಿ ಕಡೆಯಿಂದ ಕೆರೆಗೆ ಸೇರುವ ಮಲಿನ ನೀರು, ರಂಗಾಯಣ ಕಡೆಯ ಕೆರೆ ನೀರು, ಯುಜಿಸಿ ಅಕಾಡೆಮಿ ತರಬೇತಿ ಸಂಸ್ಥೆ ಭಾಗದಲ್ಲಿ ಪ್ರತ್ಯೇಕವಾಗಿ ಕೆರೆ ನೀರು ಸಂಗ್ರಹಿಸಿ ಪರೀಕ್ಷಿಸಿದಾಗ ‘ಡಿ‌ʼ ವರ್ಗಿಕರಣ ಎಂದು ನಮೂದಾಗಿದೆ. ಬೋಟಿಂಗ್ ಪಾಯಿಂಟ್ ಹಾಗೂ ಪೂರ್ಣಯ್ಯ ನಾಲೆ ಸೇರುವ ಜಾಗದಲ್ಲಿ(ಪಂಪ್‌ಹೌಸ್ ಬಳಿ) ಕೆರೆ ನೀರು ಸಂಗ್ರಹಿಸಿ ಪರೀಕ್ಷಿಸಿದಾಗ ‘ಸಿʼ ವರ್ಗಿಕರಣ ಎಂದು ನಮೂದಾಗಿದೆ ಎಂದು ಮಾಲಿನ್ಯ ಮಂಡಳಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ನಿಸರ್ಗದಲ್ಲಿ ದೊರೆಯುವ ನೀರನ್ನು ಸಂಗ್ರಹಿಸಿ ಬಳಕೆಗೆ ಯೋಗ್ಯವೇ ಎಂದು ವರ್ಗೀಕರಿಸಿದಾಗ, ಸಾಂಪ್ರದಾಯಿಕವಾಗಿ ಸಂಸ್ಕರಿಸದೆ ಸೋಂಕು ನಿವಾರಿಸಿದ ನಂತರ ಕುಡಿಯುವ ನೀರಿನ ಮೂಲವನ್ನಾಗಿ (‘ಎʼ ವರ್ಗಿಕರಣ) ಬಳಸವುದು. ‘ಬಿʼ ವರ್ಗೀಕರಣ ಎಂದಿದ್ದರೆ ನೀರನ್ನು ವ್ಯವಸ್ಥಿತವಾಗಿ ಸ್ನಾನಕ್ಕೆ ಉಪಯೋಗಿಸುವುದು(‘ಬಿ ವರ್ಗಿಕರಣ). ನೀರನ್ನು ಸಂಸ್ಕರಿಸಿ ಹಾಗೂ ಸೋಂಕು ನಿವಾರಿಸಿದ ನಂತರ(ಸಿ ವರ್ಗಿಕರಣ) ಕುಡಿಯುವ ನೀರಿನ ಮೂಲವನ್ನಾಗಿ ಬಳಸಬಹುದು. ನೀರನ್ನು ವರ್ಗೀಕರಿಸಿದಾಗ ‘ಡಿʼ ವರ್ಗಿಕರಣ ಎಂದು ನಮೂದಾದರೆ ಮೀನುಗಾರಿಕೆ ಮತ್ತು ವನ್ಯಜೀವಿಗಳ ಬಳಕೆಗೆ ಯೋಗ್ಯ. ನೀರನ್ನು ವರ್ಗೀಕಸಿದಾಗ ‘ಇ ವರ್ಗೀಕರಣ ಎಂದು ನಮೂದಾದರೆ ನಿಯಂತ್ರಿತ ವಿಲೇವಾರಿ, ಕೈಗಾರಿಕಾ ಶೀತಲೀಕರಣ ಹಾಗೂ ವ್ಯವಸ್ಥಾಯಕ್ಕೆ ಉಪಯೋಗಸುವ ನೀರಿನ ಮೂಲವನ್ನಾಗಿ ಬಳಕೆ ಮಾಡಬಹುದು.

ಈ ವಿಶ್ಲೇಷಣಾ ವರದಿ ಅನ್ವಯ, ವಿವಿಧೆಡೆಯಿಂದ ತಾಜ್ಯ ಮಲಿನ ನೀರು ಕೆರೆಗೆ ಸೇರುತ್ತಿರುವುದರಿಂದ ಕುಕ್ಕರಹಳ್ಳಿ ಕೆರೆಯ ನೀರಿನ ಗುಣಮಟ್ಟದ ಮಾದರಿಯನ್ನು ವಿಶ್ಲೇಷಣೆ ಮಾಡಿದಾಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನೀರಿನ ವರ್ಗೀಕರಣದನ್ವಯ ಕೆಲವೊಮ್ಮೆ ‘ಡಿ ಮತ್ತು ‘ಸಿ ನಲ್ಲಿ ವರ್ಗೀಕರಿಸಲಾಗಿದೆ. ಕಲುಷಿತ ನೀರು ಕೆರೆಗೆ ಸೇರುವುದರಿಂದ ಕೆರೆ ನೀರಿನ ಗುಣಮಟ್ಟವು ದಿನೇದಿನೆ ಕುಂದುತ್ತಿರುವುದರಿಂದ ತ್ಯಾಜ್ಯ ಮಲಿನ ನೀರು ಕೆರೆಗೆ ಸೇರದಂತೆ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಕುಕ್ಕರಹಳ್ಳಿ ಕೆರೆಗೆ ತ್ಯಾಜ್ಯ ನೀರು ಸೇರಿ ಮಲಿನವಾಗುವ ಕುರಿತು ಪರೀಕ್ಷೆಗೆ ಎಂಜಿಪಿ ೨೦೨೫ರ ಏ.೧೫ರಂದು ಒತ್ತಾಯಿಸಿತ್ತು. ಕ್ರಮೇಣ ಏ.೧೬ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕೆರೆ ನೀರಿ ಮಾದರಿ ಸಂಗ್ರಹ. ಏ.೧೯ರಂದು ಕುಕ್ಕರಹಳ್ಳಿ ಕೆರೆ ಮಲಿನ ನೀರು ತಡೆಗಟ್ಟುವಂತೆ ವಿಶ್ಲೇಷಣಾ ವರದಿಯನ್ನು ಪಾಲಿಕೆ ಆಯುಕ್ತರಿಗೆ ಸಲ್ಲಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

17 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

1 hour ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

3 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago