ಮೈಸೂರು

ಪ್ರಜಾಪ್ರಭುತ್ವ ದಿನಾಚರಣೆ | ಇತಿಹಾಸ ನಿರ್ಮಾಣ ಮಾಡಿದ ಮಾನವ ಸರಪಳಿ ಕಾರ್ಯಕ್ರಮ

  • ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ
  • ಮಾನವ ಸರಪಳಿಗೆ ಗಜಪಡೆ ಸಾಥ್
  • ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ

ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಕರೆ ನೀಡಿದರು.

ನಗರದ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದೆ. ರಾಜ್ಯದ ಬೀದರ್ ನಿಂದ ಹಿಡಿದು ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಿ ಇತಿಹಾಸ ಸೃಷ್ಟಿಸುವುದಕ್ಕೆ ಸಾಕ್ಷಿ ಯಾಗಿದ್ದು ಇದರ ಉದ್ದೇಶ ಸಂವಿಧಾನವನ್ನು ಇನ್ನು ಗಟ್ಟಿಗೊಳಿಸುವುದು ಹಾಗೂ ಅರಿವು ಮೂಡಿಸುವುದಾಗಿದೆ ಎಂದರು.

‘ಡಾ.ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ. ಅದನ್ನು ನಾವೆಲ್ಲರೂ ನಮಗಾಗಿ ಅರ್ಪಿಸಿಕೊಂಡು ಶಾಸನವಾಗಿ ಒಪ್ಪಿಕೊಂಡಿದ್ದೇವೆ. ಕೈಹಿಡಿದು ನಿಲ್ಲುವುದರೊಂದಿಗೆ, ಪರಸ್ಪರ ಸಹಾಯ ಹಸ್ತ ಚಾಚುವುದನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.

ಜಾತಿ ಯಾವುದೇ ಇರಬಹುದು. ಯಾವ ಮನುಷ್ಯನೂ ಅರ್ಜಿ ಹಾಕಿಕೊಂಡು ಹುಟ್ಟಿಲ್ಲ. ನಾವು ಸೃಷ್ಟಿಸಿರುವ ಜಾತಿಯಲ್ಲಿ ಮಾನವೀಯ ಮೌಲ್ಯಗಳಿಗೆ ಮಾನವ ಸಂಬಂಧಗಳಿಗೆ ಹೆಚ್ಚು ಆದ್ಯತೆ ನೀಡೋಣ ಎಂದು ಹೇಳಿದರು.

ವಿಧಾನಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ ಮಾತನಾಡಿ, ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮಾನತೆಯನ್ನು ಸಂವಿಧಾನ ನೀಡಿದೆ. ಎಲ್ಲರನ್ನೂ ಒಂದೆಂದು ಕಾಣಬೇಕು. ಎಲ್ಲರ ಹಿತವನ್ನೂ ಕಾಪಾಡಲು ನಾವೆಲ್ಲ ಮುಂದಾಗಬೇಕು’ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು.

ಬೆಳಿಗ್ಗೆ ತಾಲೀಮು ಮುಗಿಸಿ ಅರಮನೆಗೆ ವಾಪಸಾಗುತ್ತಿದ್ದ ದಸರಾ ಮಹೋತ್ಸವದ 13 ಆನೆಗಳನ್ನು ಕೂಡ ಸಾಲಿನಲ್ಲಿ ನಿಲ್ಲಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಹರೀಶ್‌ ಗೌಡ, ಡಿ.ರವಿಶಂಕರ್‌, ಮುಡಾ ಅಧ್ಯಕ್ಷ ಮರಿಗೌಡ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಹೆಗಡೆ, ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್‌, ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್‌ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago