ಮೈಸೂರು

ಮೈಸೂರು ನಗರದಲ್ಲಿ ೨೭, ಜಿಲ್ಲಾ ವ್ಯಾಪ್ತಿಯಲ್ಲಿ ೩೦ ರೌಡಿಗಳ ಗಡಿಪಾರು: ಪೊಲೀಸ್ ಆಯುಕ್ತ ಬಿ. ರಮೇಶ್

ಮೈಸೂರು: ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸುವ ಜತೆಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ತಡೆಯಲು ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕ್ರಿಟಿಕಲ್- ನಾನ್ ಕ್ರಿಟಿಕಲ್ ಮತಗಟ್ಟೆಗಳನ್ನು ಗುರುತಿಸಿ ಅದಕ್ಕೆ ತಕ್ಕಂತೆ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈಗಾಗಲೇ ಮೈಸೂರು ನಗರದಲ್ಲಿ ೨೭ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ೩೦ ರೌಡಿಗಳನ್ನು ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ.

ಜೊತೆಗೆ ರೌಡಿಶೀಟರ್‌ಗಳನ್ನು ಕರೆಯಿಸಿ ಎಚ್ಚರಿಕೆ ಕೊಡುವ ಜತೆಗೆ ಎಲ್ಲರ ಮೇಲೂ ನಿಗಾ ಇಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ನಗರ ವ್ಯಾಪ್ತಿಯಲ್ಲಿ ೯೭೧ ಮತಗಟ್ಟೆಗಳಿದ್ದು, ಇದರಲ್ಲಿ ಒಂದಕ್ಕಿಂತ ಹೆಚ್ಚು ಇರುವ ಕ್ಲಸ್ಟರ್ ಬೂತ್‌ಗಳಿಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಪಿಎಸ್‌ಐ, ಎಸ್‌ಐಗಳು, ಕೆಎಸ್‌ಆರ್‌ಪಿ, ಸಿಎಆರ್, ಪ್ಯಾರಾಮಿಲಿಟರಿ ಪಡೆ, ಕಮಾಂಡೋ ಪಡೆಯನ್ನು ನಿಯೋಜಿಸಲಾಗುವುದು ಎಂದರು.

ನಗರ ವ್ಯಾಪ್ತಿಯ ನಾಲ್ಕು ವಿಭಾಗಗಳಲ್ಲಿ ಎಸಿಪಿ ಉಸ್ತುವಾರಿ ಹೊಣೆ ಹೊತ್ತರೆ, ಡಿಸಿಪಿಗಳು ಮಾರ್ಗದರ್ಶನ ನೀಡಲಿದ್ದಾರೆ. ಇಡೀ ನಗರದ ಮೇಲೆ ಸಂಪೂರ್ಣ ಮೇಲುಸ್ತುವಾರಿ ನೋಡಿಕೊಳ್ಳಲಾಗುವುದು ಎಂದರು.

ಮೈಸೂರು ನಗರದ ಪೊಲೀಸ್ ಠಾಣಾವ್ಯಾಪ್ತಿಗಳಲ್ಲಿ ಪಥಸಂಚಲನ ನಡೆಸಿ ಮುಕ್ತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವಂತೆ ಹೇಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ೩೦ ರೌಡಿಗಳನ್ನು ಬೆಳಗಾವಿ, ಕಲಬುರ್ಗಿ ಸೇರಿದಂತೆ ಇನ್ನಿತರ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಗೆ ಮೂರು ಪ್ಯಾರಾ ಮಿಲಿಟರಿ ತುಕಡಿ ಬಂದಿವೆ.  ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳು, ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ವಿವಿಧ ಹಂತದ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಾಮಾನ್ಯ ಮತಗಟ್ಟೆಗೆ ಒಬ್ಬರು ಪಿಸಿ, ಹೋಂಗಾರ್ಡ್, ಕ್ರಿಟಿಕಲ್ ಬೂತ್‌ಗೆ ಒಬ್ಬರು ಪಿಸಿ, ಎಚ್‌ಪಿಸಿ ನಿಯೋಜಿಸಲಾಗುವುದು. ಆಯಾಯ ಕ್ಲಸ್ಟರ್‌ನ ಅಧಿಕಾರಿಗಳು ಗಸ್ತು ಮಾಡಲಿದ್ದಾರೆ ಎಂದು ಹೇಳಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago