ಮೈಸೂರು

ಆಷಾಢ ಮಾಸ | ಚಾಮುಂಡಿ ಬೆಟ್ಟದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಮೈಸೂರು: ಆಷಾಢ ಮಾಸದಲ್ಲಿ ಚಾಮುಂಡಿಬೆಟ್ಟಕ್ಕೆ ಶುಕ್ರವಾರ, ವರ್ಧಂತಿ ದಿನದಂದು ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವುದರ ಕುರಿತು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಥಳ ಪರಿಶೀಲಿಸಿದರು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರೊಂದಿಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮಹಿಷಾಸುರ ಪ್ರತಿಮೆ, ಪಾರ್ಕಿಂಗ್ ಸ್ಥಳ, ಬಸ್ ನಿಲ್ದಾಣ, ಭಕ್ತಾದಿಗಳು ಸಾಲಾಗಿ ನಿಲ್ಲುವ ಮಾರ್ಗಗಳಲ್ಲಿ ಪೊಲೀಸ್ ಭದ್ರತೆಗೆ ಮಾಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದರು.

ಭಕ್ತಾದಿಗಳು ನಿಲ್ದಾಣದಲ್ಲಿ ಇಳಿದು ನೇರವಾಗಿ ಕ್ಯೂನಲ್ಲಿ ಆಗಮಿಸಿ ದೇವಸ್ಥಾನ ಪ್ರವೇಶ ಮಾಡುವುದು. ವಿವಿಐಪಿಗಳಿಗೆ ಪ್ರತ್ಯೇಕ ಲೈನ್, ಕೌಂಟರ್‌ನಲ್ಲಿ ಟಿಕೆಟ್ ಖರೀದಿಸಿದವರು ನೇರವಾಗಿ ಹೋಗುವಂತೆ ಮಾಡಲು ಪ್ರತ್ಯೇಕ ಸಾಲು ಮಾಡಿರುವ ಬಗ್ಗೆ ವಿವರಿಸಲಾಯಿತು.

ಇದನ್ನೂ ಓದಿ:- ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 AMBULANCEಗಳ ನಿರ್ವಹಣೆ: ಸಚಿವ ದಿನೇಶ್‌ ಗುಂಡೂರಾವ್‌

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ದೇವಸ್ಥಾನದಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ನಂತರ, ದಾಸೋಹ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಶುರುಮಾಡುವಂತೆ ಸೂಚಿಸಿದರು.

ಡಿಸಿಪಿಗಳಾದ ಎಂ.ಮುತ್ತುರಾಜ್, ಕೆ.ಎಸ್.ಸುಂದರ್ ರಾಜ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

14 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

14 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

14 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

14 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

14 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago