Chamundi Hill
ಮೈಸೂರು: ಆಷಾಢ ಮಾಸದಲ್ಲಿ ಚಾಮುಂಡಿಬೆಟ್ಟಕ್ಕೆ ಶುಕ್ರವಾರ, ವರ್ಧಂತಿ ದಿನದಂದು ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವುದರ ಕುರಿತು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಥಳ ಪರಿಶೀಲಿಸಿದರು.
ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರೊಂದಿಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮಹಿಷಾಸುರ ಪ್ರತಿಮೆ, ಪಾರ್ಕಿಂಗ್ ಸ್ಥಳ, ಬಸ್ ನಿಲ್ದಾಣ, ಭಕ್ತಾದಿಗಳು ಸಾಲಾಗಿ ನಿಲ್ಲುವ ಮಾರ್ಗಗಳಲ್ಲಿ ಪೊಲೀಸ್ ಭದ್ರತೆಗೆ ಮಾಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದರು.
ಭಕ್ತಾದಿಗಳು ನಿಲ್ದಾಣದಲ್ಲಿ ಇಳಿದು ನೇರವಾಗಿ ಕ್ಯೂನಲ್ಲಿ ಆಗಮಿಸಿ ದೇವಸ್ಥಾನ ಪ್ರವೇಶ ಮಾಡುವುದು. ವಿವಿಐಪಿಗಳಿಗೆ ಪ್ರತ್ಯೇಕ ಲೈನ್, ಕೌಂಟರ್ನಲ್ಲಿ ಟಿಕೆಟ್ ಖರೀದಿಸಿದವರು ನೇರವಾಗಿ ಹೋಗುವಂತೆ ಮಾಡಲು ಪ್ರತ್ಯೇಕ ಸಾಲು ಮಾಡಿರುವ ಬಗ್ಗೆ ವಿವರಿಸಲಾಯಿತು.
ಇದನ್ನೂ ಓದಿ:- ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 AMBULANCEಗಳ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ದೇವಸ್ಥಾನದಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ನಂತರ, ದಾಸೋಹ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಶುರುಮಾಡುವಂತೆ ಸೂಚಿಸಿದರು.
ಡಿಸಿಪಿಗಳಾದ ಎಂ.ಮುತ್ತುರಾಜ್, ಕೆ.ಎಸ್.ಸುಂದರ್ ರಾಜ್ ಮತ್ತಿತರರು ಹಾಜರಿದ್ದರು.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…