ಮೈಸೂರು : ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಪೊಲೀಸ್ ಮುಖ್ಯ ಪೇದೆಯನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.
ನಗರದ ವಿವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಿ.ಪ್ರದೀಪ್ ಎಂಬುವರು ಅಮಾನತು ಆಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್ಶಾಟ್ ಜೊತೆ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದರು. ಇಲಾಖಾ ವಿಚಾರಣೆ ಬಾಕಿ ಇರಿಸಿ ಮುಖ್ಯ ಪೇದೆ ಬಿ.ಪ್ರದೀಪ್ ಅವರನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…