ಮೈಸೂರು

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್

ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಮತ್ತೊಂದೆಡೆ ಪ್ರೊ.ಭಗವಾನ್ ಬಂಧಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

ಪ್ರೊ.ಭಗವಾನ್ ಅವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೆಲವು ಹಿಂಬಾಲಕರನ್ನು ಖುಷಿಯಾಗಿಡಲು ಈ ರೀತಿ ಹೇಳಿಕೆ ನೀಡಿದ್ದಾರೆ. ಒಕ್ಕಲಿಗ ಸಮುದಾಯದ ವಿರುದ್ಧ ಉದ್ದೇಶಪೂರ್ವಕವಾಗಿ ಮಾತನಾಡಿದ್ದಾರೆ. ಇದು ದೇಶದ ಸಹಬಾಳ್ವೆ ಒಗ್ಗಟ್ಟು‌ ಒಡೆಯುವ ಕೆಲಸ. ಅದಕ್ಕೆ ದೇಶದ್ರೋಹಿ ಪ್ರಕರಣ ದಾಖಲಿಸುವಂತೆ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಸದ್ಯ ಸೆಕ್ಷನ್ 153 ಅಡಿ ಗಲಾಟೆಗೆ ಪ್ರಚೋದನಕಾರಿಯಾಗುವಂತಹ ಭಾಷಣ. 153A ಎರಡು ಸಮುದಾಯದ ನಡುವೆ ಗಲಾಟೆ ಉಂಟು ಮಾಡುವುದು, ದ್ವೇಷ ಹೆಚ್ಚಿಸುವ ಆರೋಪದಡಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಎಫ್​ಐಆರ್ ದಾಖಲಾದ ಬೆನ್ನಲ್ಲೇ ಪ್ರೊ.ಭಗವಾನ್ ಬಂಧಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸದಸ್ಯರು, ಎಫ್​ಐಆರ್ ಆಗಿರುವುದು ಸ್ವಾಗತ. ಕೂಡಲೇ ಭಗವಾನ್ ವಿರುದ್ಧ ಕಾನೂನು ಕ್ರಮ ಆಗಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಸುತ್ತೇವೆ. ಕುವೆಂಪು ಅವರು ಎಲ್ಲೂ ಭಗವಾನ್ ಹೇಳಿದ ರೀತಿ ಹೇಳಿಲ್ಲ. ಅವರು ಹೇಳಿರುವುದು ಕಾದಂಬರಿಯಲ್ಲಿ. ಕಾದಂಬರಿ ಕಾಲ್ಪನಿಕವಾದ ಒಂದು ಕಥೆ. ಭಗವಾನ್‌ಗೆ ನೀಡಿರುವ ಭದ್ರತೆ ವಾಪಸ್ಸು ಪಡೆಯಬೇಕು. ಭಗವಾನ್ ಅವರನ್ನು ಯಾವುದೇ ಕಾರ್ಯಕ್ರಮಗಳಿಗೆ ಕರೆಯಬಾರದು ಎಂದು ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

lokesh

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

7 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

7 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

7 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

7 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

7 hours ago