ಮೈಸೂರು

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್

ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಮತ್ತೊಂದೆಡೆ ಪ್ರೊ.ಭಗವಾನ್ ಬಂಧಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

ಪ್ರೊ.ಭಗವಾನ್ ಅವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೆಲವು ಹಿಂಬಾಲಕರನ್ನು ಖುಷಿಯಾಗಿಡಲು ಈ ರೀತಿ ಹೇಳಿಕೆ ನೀಡಿದ್ದಾರೆ. ಒಕ್ಕಲಿಗ ಸಮುದಾಯದ ವಿರುದ್ಧ ಉದ್ದೇಶಪೂರ್ವಕವಾಗಿ ಮಾತನಾಡಿದ್ದಾರೆ. ಇದು ದೇಶದ ಸಹಬಾಳ್ವೆ ಒಗ್ಗಟ್ಟು‌ ಒಡೆಯುವ ಕೆಲಸ. ಅದಕ್ಕೆ ದೇಶದ್ರೋಹಿ ಪ್ರಕರಣ ದಾಖಲಿಸುವಂತೆ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಸದ್ಯ ಸೆಕ್ಷನ್ 153 ಅಡಿ ಗಲಾಟೆಗೆ ಪ್ರಚೋದನಕಾರಿಯಾಗುವಂತಹ ಭಾಷಣ. 153A ಎರಡು ಸಮುದಾಯದ ನಡುವೆ ಗಲಾಟೆ ಉಂಟು ಮಾಡುವುದು, ದ್ವೇಷ ಹೆಚ್ಚಿಸುವ ಆರೋಪದಡಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಎಫ್​ಐಆರ್ ದಾಖಲಾದ ಬೆನ್ನಲ್ಲೇ ಪ್ರೊ.ಭಗವಾನ್ ಬಂಧಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸದಸ್ಯರು, ಎಫ್​ಐಆರ್ ಆಗಿರುವುದು ಸ್ವಾಗತ. ಕೂಡಲೇ ಭಗವಾನ್ ವಿರುದ್ಧ ಕಾನೂನು ಕ್ರಮ ಆಗಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಸುತ್ತೇವೆ. ಕುವೆಂಪು ಅವರು ಎಲ್ಲೂ ಭಗವಾನ್ ಹೇಳಿದ ರೀತಿ ಹೇಳಿಲ್ಲ. ಅವರು ಹೇಳಿರುವುದು ಕಾದಂಬರಿಯಲ್ಲಿ. ಕಾದಂಬರಿ ಕಾಲ್ಪನಿಕವಾದ ಒಂದು ಕಥೆ. ಭಗವಾನ್‌ಗೆ ನೀಡಿರುವ ಭದ್ರತೆ ವಾಪಸ್ಸು ಪಡೆಯಬೇಕು. ಭಗವಾನ್ ಅವರನ್ನು ಯಾವುದೇ ಕಾರ್ಯಕ್ರಮಗಳಿಗೆ ಕರೆಯಬಾರದು ಎಂದು ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

lokesh

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

9 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

12 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

13 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

14 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

15 hours ago