ಮೈಸೂರು

ಜ.9ರಿಂದ ಮೈಸೂರಲ್ಲಿ ʻದೇಸಿ ಎಣ್ಣೆ ಮೇಳʼ

ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ ಸಂಸ್ಥೆಯು ದೇಸಿರಿ ಜೊತೆಗೂಡಿ ಜ.9 ರಿಂದ 11ರವರೆಗೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ‘ದೇಸಿ ಎಣ್ಣೆ ಮೇಳ’ ವನ್ನು ಆಯೋಜಿಸಿದೆ.

ಮೂರು ದಿನಗಳ ಕಾಲ ನಡೆಯಲಿರುವ ಎಣ್ಣೆ ಮೇಳದಲ್ಲಿ 50ಕ್ಕೂ ಹೆಚ್ಚು ಸಾಂಪ್ರದಾಯಿಕ ಎಣ್ಣೆಗಳನ್ನು ಪರಿಚಯಿಸಲಾಗುತ್ತದೆ. ಸಾಂಪ್ರದಾಯಿಕ ಪದ್ಧತಿಯಲ್ಲಿ ಎತ್ತಿನ ಗಾಣದಿಂದ ಅಡುಗೆ ಎಣ್ಣೆ ತೆಗೆಯುವ ಹಾಗೂ ಹರಳೆಣ್ಣೆ ತೆಗೆಯುವ ಪ್ರಾತ್ಯಕ್ಷಿಕೆ, 50ಕ್ಕೂ ಹೆಚ್ಚು ವಿವಿಧ ಬಗೆಯ ಎಣ್ಣೆಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.

ವಿಜ್ಞಾನಿಗಳು, ಕಲಬೆರಕೆ ಎಣ್ಣೆಯನ್ನು ಪತ್ತೆ ಹಚ್ಚುವ ಬಗೆಯನ್ನು ಹೇಳಿಕೊಡಲಿದ್ದಾರೆ. ಆಯುರ್ವೇದ ತಜ್ಞ ವೈದ್ಯರು ಉಚಿತ ಸಲಹೆ ಮತ್ತು ಆರೋಗ್ಯಕ್ಕೂ ಎಣ್ಣೆಗಳಿಗೂ ಇರುವ ಸಂಬಂಧದ ಮಾಹಿತಿ ನೀಡಲಿದ್ದಾರೆ. ಜ.9ರಂದು ಸಂಜೆ 6ಗಂಟೆಗೆ ಡಾ.ಖಾದರ್ ವಲಿ ಅವರಿಂದ ಉಪನ್ಯಾಸ, ಜ.10ರಂದು ಬೆಳಿಗ್ಗೆ 11ಕ್ಕೆ ಎಣ್ಣೆಕಾಳು ಕೃಷಿ ಮತ್ತು ಮೌಲ್ಯವರ್ಧನೆಯ ರೈತ ತರಬೇತಿ ಕಾರ್ಯಕ್ರಮ, ಜ.11ರಂದು ಬೆಳಿಗ್ಗೆ 11.30ಕ್ಕೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, ಮಧ್ಯಾಹ್ನ 12 ಗಂಟೆಗೆ ಹೋಮಿಯೋಪತಿ, ಅಲೋಪತಿ, ಆಯುರ್ವೇದ, ಯುನಾನಿ ಮತ್ತು ಪೌಷ್ಟಿಕತೆ ತಜ್ಞ ವೈದ್ಯರೊಂದಿಗೆ ಸಂವಾದ ನಡೆಯಲಿದೆ.

ಮೇಳದಲ್ಲಿ 50 ಗುಡಿ ಕೈಗಾರಿಕೆ ಉದ್ಯಮಗಳ ಮಾರಾಟ ಮಳಿಗೆಗಳು ಇರುತ್ತವೆ ಜತೆಗೆ ವೈವಿಧ್ಯಮಯ ಆಹಾರ ಖಾದ್ಯಗಳನ್ನು ಸವಿಯಲು ಅವಕಾಶವಿದೆ. ಹೆಚ್ಚಿನ ವಿವರಗಳಿಗೆ ಮೊ.ಸಂ. 9535149520 ಅನ್ನು ಸಂಪರ್ಕಿಸಬಹುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…

1 min ago

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…

16 mins ago

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…

20 mins ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…

22 mins ago

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್‌ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…

41 mins ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…

1 hour ago