Mysore
33
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

ನಂಜನಗೂಡಿನಲ್ಲಿ 46 ಮರಗಳ ಹನನ: ಯಶಸ್ವಿಯಾಗಿ ನಡೆದ ಪ್ರತಿಭಟನೆ

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳಿಂದ, ಇಂದು ಅರಣ್ಯ ಭವನದ ಮುಂದೆ ನಡೆದ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ‘ಪರಿಸರಕ್ಕಾಗಿ ನಾವು’ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ, ಘಟನೆ ನಡೆದು ಎರಡು ವಾರಗಳಾದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಿಲ್ಲ. ಮರಗಳನ್ನು ಅಕ್ರಮವಾಗಿ ಕಡಿಯಲು ಕಾರಣರಾದವರನ್ನು ಇನ್ನೂ ಪತ್ತೆ ಹಚ್ಚಿಲ್ಲ. ಇಷ್ಟು ಗಂಭೀರವಾದ ಘಟನೆಯನ್ನು ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಹಗುರವಾಗಿ ತೆಗೆದುಕೊಂಡಿದೆ.

ಹಾಡುಹಗಲೇ ರಾಜಾರೋಷವಾಗಿ ಸರ್ಕಾರಿ ಜಾಗದಲ್ಲಿ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವುದು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಷ್ಕ್ರಿಯತೆನ್ನು ತೋರಿಸುತ್ತದೆ. ಈ ಘಟನೆ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಿ ಮರಗಳನ್ನು ಕಡಿದರವರಿಗೆ, ಕಡಿಯಲು ಕಾರಣರಾದವರಿಗೆ ಮತ್ತು ಇವರ ಜೊತೆಗೆ ಶಾಮೀಲಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲು ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಘಟನೆ ನಡೆದಿರುವುದು ಮುಖ್ಯ ಮಂತ್ರಿಗಳ ತವರು ಜಿಲ್ಲೆಯಲ್ಲಿ ಅಷ್ಟೇ ಅಲ್ಲ. ಅವರೇ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ . ಮಾನ್ಯ ಮುಖ್ಯ ಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಈ ಅಕ್ರಮ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮಗಳನ್ನು ವಹಿಸುವ ಮೂಲಕ ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಬೇಕು ಎಂದು ಹೇಳಿದರು.

Tags:
error: Content is protected !!