ಮೈಸೂರು : ಜಿಲ್ಲೆಯಲ್ಲಿ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೆಚ್ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ವೀರನ ಹೊಸಹಳ್ಳಿ ವಲಯದ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಿಂಡು ದಾಳಿ ಮಾಡಿದ್ದರಿಂದ ಸುರೇಶ್ ಎಂಬುವವರ ಎರಡು ಎಕರೆ ಬಾಳೆ, ರೈತ ಸಿದ್ದನಾಯಕ ಎಂಬುವವರ ಒಂದು ಎಕರೆ ಕಬ್ಬು ನಾಶವಾಗಿದೆ. ಸ್ಥಳಕ್ಕೆ ಬಾರದ ಅರಣ್ಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ,
ಕಾಡು ಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹುಲಿ ಹಾಗೂ ಆನೆಯ ದಾಳಿಗೆ ಜನ ಜಾನುವಾರು ಸಾವನ್ನಪ್ಪಿತ್ತಿವೆ. ಜೊತೆಗೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿದೆ. ಅರಣ್ಯ ಇಲಾಖೆ ಸೂಕ್ತ ಕಾವಲುಗಾರರನ್ನು ನೇಮಿಸುತ್ತಿಲ್ಲ. ಕಾವಲುಗಾರರು ಇರದ ಕಾರಣ ಈ ರೀತಿಯಾಗುತ್ತಿದೆ. ಸುಮಾರು 3 ಲಕ್ಷ ರೂ ಖರ್ಚು ಮಾಡಿ ಬೆಳೆ ಬೆಳೆದಿದ್ದು, ಆನೆಗಳ ದಾಳಿಯಿಂದ ಸಂಪೂರ್ಣ ಹಾನಿ ಆಗಿದೆ.
ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು. ಕಾಡು ಪ್ರಾಣಿಗಳ ಉಪಟಳವನ್ನು ಶಾಶ್ವತವಾಗಿ ತಪ್ಪಿಸಬೇಕು ಎಂದು ರೈತರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…