ಮೈಸೂರು

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ : ಬಿ.ವೈ.ವಿ

ಮೈಸೂರು : ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಬಿಜೆಪಿ ೧೩೦ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ಹಳೆಯ ಮೈಸೂರು ಭಾಗದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲಲು ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದರು.

ನಗರದ ರಾಮಾನುಜ ರಸ್ತೆಯಲ್ಲಿನ ರಾಜೇಂದ್ರ ಕಲಾಮಂದಿರದಲ್ಲಿ ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿಕಸಿತ ಭಾರತದ ಅಮೃತಕಾಲ ಸೇವೆ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ ೧೧ ವರ್ಷ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರದೊಂದಿಗೆ ಕೈ ಜೋಡಿಸಿ ಕೆಲಸ ಮಾಡಲು ಬಿಜೆಪಿ ಅಽಕಾರಕ್ಕೆ ತರಬೇಕಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ತನಕವೂ ನಾನು ವಿರಮಿಸುವುದಿಲ್ಲ. ಎರಡು ವರ್ಷಗಳಿಂದ ಕಾಂಗ್ರೆಸ್ ನಾಯಕರ ದರ್ಪ, ಸೊಕ್ಕು ಸಹಿಸಿಕೊಂಡು ಬಂದಿದ್ದೇವೆ. ಇವರ ಅಹಂಕಾರದ ವರ್ತನೆ ದೂರಾಗುವ ದಿನಗಳು ಬರುತ್ತವೆ. ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ ಎಂದು ಅವರ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲರೇ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು ಮುಂದೆ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ಸಲಹೆ ಪಡೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಡಳಿತ ಮತ್ತು ತಮ್ಮ ಕಾಂಗ್ರೆಸ್ ಸರ್ಕಾರದ ಅವಽಯಲ್ಲಿ ಮೈಸೂರು,ಚಾಮರಾಜನಗರ ಜಿಲ್ಲೆಗಳಿಗೆ ನೀಡಿರುವ ಕೊಡುಗೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

35 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago