ಮೈಸೂರು

ಸಿಜೆಐಗೆ ಶೂ ಎಸೆದ ವಕೀಲನ ಗಲ್ಲಿಗೇರಿಸಿ: ದೇವಗಳ್ಳಿ ಸೋಮಶೇಖರ ಒತ್ತಾಯ

ಮೈಸೂರು: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲೆ ರೋಹಿತ್ ಪಾಂಡೆ ಎಂಬ ವಕೀಲ ಶೂ ಎಸೆದು ನಡೆಸಲು ಯತ್ನಿಸಿದ ದಾಳಿಯು ಪಾಕಿಸ್ತಾನಿ ಉಗ್ರರಿಗಿಂತಲೂ ಕ್ರೂರವಾಗಿದ್ದು, ಕೂಡಲೇ ಆತನನನ್ನು ಗಲ್ಲಿಗೇರಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಮುಖಂಡ ದೇವಗಳ್ಳಿ ಸೋಮಶೇಖರ್ ಒತ್ತಾಯಿಸಿದ್ದಾರೆ.

ಇದನ್ನು ಓದಿ : ಸುಪ್ರೀಂಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆತ: ವಕೀಲನ ಬಂಧನ

ಮಧ್ಯಪ್ರದೇಶದಲ್ಲಿ ವಿಷ್ಣುವಿನ ದೇವಸ್ಥಾನ ಮರು ನಿರ್ಮಾಣ ಮಾಡಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂದರೆ ಸನಾತನ ಧರ್ಮವನ್ನು ಮೌಢ್ಯ ಬಂಡವಾಳ ಮಾಡಿಕೊಂಡಿರುವ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಕೈವಾಡ ಈ ಪ್ರಕರಣದಲ್ಲಿದೆ. ದೇಶವನ್ನು ಅಭದ್ರತೆಯತ್ತ ಕೊಂಡೊಯ್ಯುತ್ತಿರುವ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನ್ಯಾಯಮೂರ್ತಿಗಳು ಪ್ರಮಾಣ ವಚನ ಪಡೆದ ದಿನದಿಂದಲೂ ಸಂವಿಧಾನವನ್ನೂ ಬಲವಾಗಿ ಸಮರ್ಥಿಸಿಕೊಂಡು ಅಂಬೇಡ್ಕರ್‌ರವರ ಆಶಯಗಳನ್ನು ಮತ್ತು ಸಂವಿಧಾನದ ಮೂಲ ಆಶಯಗಳನ್ನು ಪ್ರತಿಪಾದಿಸುತ್ತಾ ಅವುಗಳನ್ನು ಗಟ್ಟಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊAಡ ಮನುವಾದಿಗಳು ಈ ರೀತಿಯ ದೇಶದ್ರೋಹ ಪ್ರಕರಣಗಳನ್ನು ನಡೆಸುತ್ತಿದ್ದು, ದೇಶದಲ್ಲಿನ ಪ್ರಜ್ಞಾವಂತರು, ಸುಧಾರಕರು, ಪ್ರಗತಿಪರರು, ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ರಕ್ಷöಣೆಗೆ ಮುಂದಾಗಬೇಕಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago