ಮೈಸೂರು: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಅಕ್ಷತಾ ಗಣೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಸರಸ್ವತಿಪುರಂ ಜೆಎಸ್ಎಸ್ ಮಹಿಳಾ ಕಾಲೇಜಿನ ವತಿಯಿಂದ ಸೋಮವಾರ(ಮೇ.20) ಆಯೋಜಿಸಿದ್ದ ಸಾಂಸ್ಕೃತಿಕ, ಸಾಹಿತ್ಯಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸವಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೆಎಸ್ಎಸ್ ಸಂಸ್ಥೆಯಲ್ಲಿರುವ ಪ್ರತಿಯೊಬ್ಬರು ಪ್ರತಿಭೆ ಹೊಂದಿರುವವರೇ, ಇದಕ್ಕೆ ನಮ್ಮ ಗುರುಗಳು ಕಾರಣ, ಪ್ರತಿಯಾಗಿ ನೀವು ಗುರುಗಳಿಗೆ ಕೃತಜ್ಞರಾಗಿರಿ. ಜೆಎಸ್ಎಸ್ ಸಂಸ್ಥೆಯಿಂದ ನಗರದ ಜೊತೆ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ವಿದ್ಯಾವಂತರಾಗುತ್ತಿದ್ದಾರೆ. ಉತ್ತಮ ಬೋದಕರು, ಗುಣ ಮಟ್ಟದ ಶಿಕ್ಷಣ ಸಿಗುತ್ತಿದೆ ಎಂದರು.
ಪ್ರತಿಯೊಂದರಲ್ಲೂ ಸ್ಪರ್ದೆ ಇದ್ದರಷ್ಟೆ ನಮಗೆ ಶೈಕ್ಷಣಿಕ ಜೊತೆಗೆ ಕ್ರೀಡೆಗಳಲ್ಲೂ ಹೆಚ್ಚಿನ ಆಸಕ್ತಿ ಬರುತ್ತದೆ. ಸಮಾಜಕೊಸ್ಕರ ಅಥವಾ ಇನ್ನೊಬ್ಬರನ್ನು ಓಲೈಸುವುದಕ್ಕೆ ಓದಬೇಡಿ ನಿಮಗೊಸ್ಕರ ಶಿಕ್ಷಣವನ್ನು ಮಾಡಿ, ಅಲ್ಲದೇ ನಿಮಗೆ ಕೂತಹಲ ಇರುವ ವಿಷಯದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಫಲಿತಾಂಶದ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಕಷ್ಟು ನೋಡಿದ್ದೇವೆ. ಆದರೆ ಅಂತಹ ಸನ್ನಿವೇಶಗಳನ್ನು ಎದುರಿಸಿದರೆ ಮುಂದೆ ನಾವು ಸಾಧಾನೆಯತ್ತ ಸಾಗಬಹುದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಸುದರ್ಶನ್, ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜಿನ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ, ಡೀನ್ ರೇಚಣ್ಣ, ಪ್ರಾಂಶುಪಾಲರಾದ ಪೂರ್ಣಿಮಾ, ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಉಷಾರಾಣಿ ಹಾಗೂ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…