ಮೈಸೂರು

ದಸರಾ ನೆಪದಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು: ಅಧಿಕಾರಿಗಳಿಗೆ ಸಿಎಂ ತಾಕೀತು

ಮೈಸೂರು: ದಸರಾ ನೆಪದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ಕಳ್ಳಾಟವಾಡದೆ ಜನರ ಕೆಲಸಗಳನ್ನು ಮಾಡಬೇಕು ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ದಸರಾ ಜನರ ಉತ್ಸವ, ಇದು ಸರ್ಕಾರದ ಉತ್ಸವ ಅಲ್ಲ ಇದರ ಹೊಣೆ ಜಿಲ್ಲಾಡಳಿತದ್ದು ಎಂದು ಸಿಎಂ ಹೇಳಿದರು.

ಜನತಾ ನ್ಯಾಯಾಲಯ ಮುಖ್ಯ
ಎಲ್ಲಾ ನ್ಯಾಯಲಯಗಳಿಗಿಂತ ಜನತಾ ನ್ಯಾಯಾಲಯ ಮುಖ್ಯ, ಆತ್ಮಸಾಕ್ಷಿ ಮುಖ್ಯ ಎನ್ನುವ ಮಹಾತ್ಮಗಾಂಧಿಯವರ ಮಾತನ್ನು ಅಧಿಕಾರಿಗಳಿಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ, ನೆಪ ಹೇಳುವುದು, ಸುಳ್ಳು ಹೇಳುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. ಒಂದು ಸುಳ್ಳು ಹೇಳಿದರೆ ಅದನ್ನು ಸಮರ್ಥಿಸಲು ಮತ್ತೊಂದು, ಇನ್ನೊಂದು ಸುಳ್ಳುಗಳನ್ನು ಹೇಳುತ್ತಲೇ ಹೋಗಬೇಕಾಗುತ್ತದೆ. ಹೀಗಾಗಿ ಸುಳ್ಳು ಮತ್ತು ನೆಪ ಹೇಳುವ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ. ಇದು ನಿಮ್ಮ ವೃತ್ತಿ ಜೀವನಕ್ಕೆ ಒಳ್ಳೆಯದಲ್ಲ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕಾನೂನು ಸುವ್ಯವಸ್ಥೆ ಸರಿ ಇಲ್ಲದಿದ್ದರೆ ರಾಜ್ಯದ ಅಭಿವೃದ್ಧಿ ಮತ್ತು ಆರ್ಥಿಕತೆಯ ಪ್ರಗತಿ ಸಾಧ್ಯ. ಪೊಲೀಸ್ ಇಲಾಖೆಯ ಬೇಜವಾಬ್ದಾರಿಯಿಂದ ಅಪರಾಧಗಳು ಆಗಬಾರದು. ರಾಜ್ಯದ ಬಂಡವಾಳ ಹೂಡಿಕೆಗೂ, ಕಾನೂನು-ಸುವ್ಯವಸ್ಥೆಗೂ ನೇರಾನೇರ ಸಂಬಂಧವಿದೆ-ಈ ಬಗ್ಗೆ ಕಟ್ಟೆಚ್ಚರ ವಹಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ-ಶಿಕ್ಷಣ-ಅನ್ನ-ನೀರು-ವಿದ್ಯುತ್-ರಸ್ತೆ ಸುರಕ್ಷತೆ ನನ್ನ ಪ್ರಥಮ ಆಧ್ಯತೆ. ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ಜಾತಿ ಸೋಂಕು ಇರಬಾರದು. ಸಂವಿಧಾನ ಮತ್ತು ಜಾತ್ಯತೀತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು, ಜನರ ಸೇವೆಯನ್ನು ಮಾಡಬೇಕು ಎಂದು ಹೇಳಿದರು.

ಸರ್ಕಾರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ..
ನಾವು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವುದನ್ನು ಮೊದಲ ಆಧ್ಯತೆಯನ್ನಾಗಿ ಪರಿಗಣಿಸಬೇಕು. ಈ ಐದೂ ಗ್ಯಾರಂಟಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶವೇ ಇಲ್ಲದಂತೆ ನೇರವಾಗಿ ಫಲಾನುಭವಿಗಳ ಮಡಿಲಿಗೆ ಸೇರುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ಅಸಡ್ಡೆ ಮತ್ತು ಉದಾಸೀನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಸರ್ಕಾರ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತಿದೆ. ಈ ಹಣ ಫಲಾನುವಿಗಳಿಗೆ ತಲುಪದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಗ್ಯಾರಂಟಿ ಹಣ ಜನರಿಗೆ ತಲುಪಬೇಕು. ಅಭಿವೃದ್ಧಿ ಕೆಲಸಗಳಿಗೂ ಹಣ ಹೇರಳವಾಗಿ ಬಿಡುಗಡೆ ಆಗುತ್ತಿದೆ. ಅನುದಾನ ಬಿಡುಗಡೆ ಆಗಿದೆ. ಬಜೆಟ್ನಲ್ಲಿ ಘೋಷಣೆ ಆಗಿರುವ ಕಾರ್ಯಕ್ರಮಗಳಿಗೆ ಘೋಷಿಸಿದ್ದಷ್ಟು ಹಣ ಬಿಡುಗಡೆ ಆಗುತ್ತಿದೆ. ನಾವು ಅನುದಾನ ಕೊಟ್ಟಾಗ ಆಕ್ಷನ್ ಪ್ಲಾನ್ ರೆಡಿ ಆಗಬೇಕು. ಈಗಾಗಲೇ ಸೆಪ್ಟೆಂಬರ್ ಮುಗಿಯುತ್ತಿದೆ. ಈ ಆರ್ಥಿಕ ವರ್ಷಕ್ಕೆ ಆರು ತಿಂಗಳು ಮಾತ್ರ ಉಳಿದಿದೆ. ಯಾರು ಆಕ್ಷನ್ ಪ್ಲಾನ್ ಮಾಡಿಕೊಂಡಿಲ್ಲ ಅವರ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

5 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

5 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

5 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

6 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

8 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

9 hours ago