ಮೈಸೂರು: ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಅಂತ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಮೈಸೂರಿನಲ್ಲಿ ಹೇಳಿಕೆ ನೀಡಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು , ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು. ಪ್ರವಾಸಿಗರಿಗೆ ಆಕರ್ಷಣೀಯವಾಗುವಂತೆ, ಭಕ್ತರಿಗೆ ನೆಮ್ಮದಿ ಸಿಗುವವಂತೆ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಈ ಸಂಬಂಧ ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪ್ರವಾಸಿ ತಾಣಗಳಲ್ಲಿ ವೀಕ್ಷಕರ ಸಂಖ್ಯೆ ಹೆಚ್ಚಳ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಟ್ಟ ಬಳಿಕ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದರು.
ಚಾಮುಂಡೇಶ್ವರಿ ಗೆ ವಿಶೇಷ ಪೂಜೆ
ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಹೆಚ್.ಕೆ ಪಾಟೀಲ್, ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಪ್ರಾಂಗಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಕಳೆದರು. ಇದೇ ವೇಳೆ ಅಭಿವೃದ್ಧಿ ಸಂಬಂಧ ಕೆಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಮೈಸೂರು ಟೂರಿಸಂಗೆ ಹೆಚ್ಚು ಪ್ರಾಶಸ್ತ್ಯ
ಮೈಸೂರು, ಪ್ರವಾಸಿಗರ ಸ್ವರ್ಗ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ಕೊಡುತ್ತಾರೆ. ಅಂಬಾವಿಲಾಸ ಅರಮನೆ , ಜಗನ್ಮೋಹನ ಅರಮನೆ , ಚಾಮುಂಡಿಬೆಟ್ಟ , ನಂಜನಗೂಡಿಗೆ ಹೆಚ್ಚೆಚ್ಚು ಜನರು ಆಗಮಿಸುತ್ತಾರೆ. ಇಲ್ಲಿ ಟೂರಿಸಂ ಸರ್ಕ್ಯುಟ್ ಆಗ್ಬೇಕು ಅನ್ನೋದು ಬಹಳ ವರ್ಷಗಳ ಬೇಡಿಕೆ. ಸಿಎಂ ಸಿದ್ದರಾಮಯ್ಯ ಕೂಡ ಮೈಸೂರಿನ ಮೂಲದವರೆ ಆಗಿದ್ದು, ಇದೀಗ ಜನರಲ್ಲಿ ನಿರೀಕ್ಷೆ ಇಮ್ಮಡಿಯಾಗಿದೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…