ಜನವರಿ 4ರಂದು ನಂಜನಗೂಡು ಬಂದ್‌ಗೆ ಕರೆ ನೀಡಿದ ಭಕ್ತರು

ಡಿಸೆಂಬರ್‌ 26ರಂದು ನಂಜನಗೂಡಿನಲ್ಲಿ ನಡೆಯಬೇಕಿದ್ದ ಅಂಧಕಾಸುರ ಸಂಹಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಭಕ್ತರು ಅಂಧಕಾಸುರನ ಚಿತ್ರವನ್ನು ಸಂಹಾರ ಮಂಟಪ ವೃತ್ತದಲ್ಲಿ ರಂಗೋಲಿನಲ್ಲಿ ಬರೆಯುತ್ತಾರೆ. ಬಳಿಕ ಉತ್ಸವಮೂರ್ತಿಯನ್ನು ಈ ರಂಗೋಲಿ ಬಳಿಕ ತಂದು ಕಾಲಿನಿಂದ ಅಂಧಕಾಸುರನ ರಂಗೋಲಿಯನ್ನು ಅಳಿಸಿಹಾಕುವ ಮೂಲಕ ಅಂಧಕಾಸುರ ವಧೆಯನ್ನು ಆಚರಿಸಲಾಗುತ್ತದೆ.

ಹೀಗೆ ನೂರಾರು ವರ್ಷಗಳಿಂದ ಇದೇ ರೀತಿಯ ಆಚರಣೆಯನ್ನು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿದ್ದವರಿಗೆ ಪ್ರಗತಿಪರ ಚಿಂತಕರು ಅಡ್ಡಿ ವ್ಯಕ್ತಪಡಿಸಿದ್ದಾರೆ. ಅಂಧಕಾಸುರ ವಧೆಯನ್ನು ಆಚರಿಸಬಾರದು ಎಂದು ಪ್ರಗತಿಪರ ಹೋರಾಟಗಾರರು ಪಟ್ಟುಹಿಡಿದಿದ್ದರು. ಅತ್ತ ಭಕ್ತಾದಿಗಳು ಮಾತ್ರ ತಾವು ನೂರಾರು ವರ್ಷಗಳಿಂದ ಈ ಆಚರಣೆ ಮಾಡುತ್ತಿದ್ದಾರೆ.

ಆದರೆ ಈ ಬಾರಿ ಅಂಧಕಾಸುರ ವಧೆ ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಭಕ್ತಾದಿಗಳಿಗೆ ಭಾರೀ ನಿರಾಸೆಯುಂಟಾಗಿದೆ. ಅಲ್ಲದೇ ಈ ವಾಗ್ವಾದದ ಸಂದರ್ಭದಲ್ಲಿ ದೇವರ ಮೂರ್ತಿ ಮೇಲೆ ನೀರನ್ನೂ ಸಹ ಎರಚಲಾಗಿದೆ. ಇದರಿಂದ ಬೇಸತ್ತ ಭಕ್ತಾದಿಗಳು ಜನವರಿ 4ರಂದು ನಂಜನಗೂಡು ಬಂದ್‌ ಆಚರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

andolana

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

6 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

16 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

35 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

58 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago