ಜನವರಿ 4ರಂದು ನಂಜನಗೂಡು ಬಂದ್‌ಗೆ ಕರೆ ನೀಡಿದ ಭಕ್ತರು

ಡಿಸೆಂಬರ್‌ 26ರಂದು ನಂಜನಗೂಡಿನಲ್ಲಿ ನಡೆಯಬೇಕಿದ್ದ ಅಂಧಕಾಸುರ ಸಂಹಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಭಕ್ತರು ಅಂಧಕಾಸುರನ ಚಿತ್ರವನ್ನು ಸಂಹಾರ ಮಂಟಪ ವೃತ್ತದಲ್ಲಿ ರಂಗೋಲಿನಲ್ಲಿ ಬರೆಯುತ್ತಾರೆ. ಬಳಿಕ ಉತ್ಸವಮೂರ್ತಿಯನ್ನು ಈ ರಂಗೋಲಿ ಬಳಿಕ ತಂದು ಕಾಲಿನಿಂದ ಅಂಧಕಾಸುರನ ರಂಗೋಲಿಯನ್ನು ಅಳಿಸಿಹಾಕುವ ಮೂಲಕ ಅಂಧಕಾಸುರ ವಧೆಯನ್ನು ಆಚರಿಸಲಾಗುತ್ತದೆ.

ಹೀಗೆ ನೂರಾರು ವರ್ಷಗಳಿಂದ ಇದೇ ರೀತಿಯ ಆಚರಣೆಯನ್ನು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿದ್ದವರಿಗೆ ಪ್ರಗತಿಪರ ಚಿಂತಕರು ಅಡ್ಡಿ ವ್ಯಕ್ತಪಡಿಸಿದ್ದಾರೆ. ಅಂಧಕಾಸುರ ವಧೆಯನ್ನು ಆಚರಿಸಬಾರದು ಎಂದು ಪ್ರಗತಿಪರ ಹೋರಾಟಗಾರರು ಪಟ್ಟುಹಿಡಿದಿದ್ದರು. ಅತ್ತ ಭಕ್ತಾದಿಗಳು ಮಾತ್ರ ತಾವು ನೂರಾರು ವರ್ಷಗಳಿಂದ ಈ ಆಚರಣೆ ಮಾಡುತ್ತಿದ್ದಾರೆ.

ಆದರೆ ಈ ಬಾರಿ ಅಂಧಕಾಸುರ ವಧೆ ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಭಕ್ತಾದಿಗಳಿಗೆ ಭಾರೀ ನಿರಾಸೆಯುಂಟಾಗಿದೆ. ಅಲ್ಲದೇ ಈ ವಾಗ್ವಾದದ ಸಂದರ್ಭದಲ್ಲಿ ದೇವರ ಮೂರ್ತಿ ಮೇಲೆ ನೀರನ್ನೂ ಸಹ ಎರಚಲಾಗಿದೆ. ಇದರಿಂದ ಬೇಸತ್ತ ಭಕ್ತಾದಿಗಳು ಜನವರಿ 4ರಂದು ನಂಜನಗೂಡು ಬಂದ್‌ ಆಚರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

andolana

Recent Posts

ವಂದೇ ಭಾರತ್‌ ಸ್ಲೀಪರ್‌ ರೈಲು ಶೀಘ್ರ ಚಾಲನೆ

ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…

5 mins ago

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿ.ಎಂ.ಸಿದ್ದರಾಮಯ್ಯ ಆಗ್ರಹ

ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…

45 mins ago

ಕ್ಯಾರಕಸ್‌ ಮೇಲೆ ಅಮೆರಿಕಾ ವೈಮಾನಿಕ ದಾಳಿ ; ವೆನೆಜುವೆಲಾ ಅಧ್ಯಕ್ಷ ಮಡುರೊ ಪತ್ನಿ ಸೆರೆ

ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…

56 mins ago

ದೇಶದ ಮಹಿಳಾ ಸಾಕ್ಷರತೆ ʼಸಾವಿತ್ರಾ ಬಾಯಿಪುಲೆʼ ಕೊಡುಗೆ ಅಪಾರ : ಮಾಜಿ ಸಚಿವ ಎನ್.ಮಹೇಶ್‌

ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್‌ಭವನದಲ್ಲಿ…

1 hour ago

ಆರು ತಿಂಗಳಲ್ಲಿ ಹಳೇ ಉಂಡುವಾಡಿ ಕಾಮಗಾರಿ ಪೂರ್ಣ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ…

2 hours ago

IPL 2026 | ಬಾಂಗ್ಲ ಆಟಗಾರನನ್ನು ಕೈ ಬಿಟ್ಟ ʼಕೆಕೆಆರ್‌ʼ

ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್‍ನ(ಐಪಿಎಲ್) 2026ರ…

2 hours ago