ಮೈಸೂರು

ಮೈದುಂಬಿ ಹರಿಯುತ್ತಿರುವ ಧನುಷ್ಕೋಟಿ ಜಲಪಾತ: ಸೆಲ್ಫಿ ಮೊರೆ ಹೋದ ಪ್ರವಾಸಿಗರು

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ.

ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿ ತೊರೆಗಳೆಲ್ಲಾ ತುಂಬಿ ತುಳುಕುತ್ತಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮ ತಾಲ್ಲೂಕಿನ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.

ಜಲಪಾತದಲ್ಲಿ ನೀರಿನ ಹರಿವು ಹೆಚ್ಚಳವಾಗಿರುವ ಪರಿಣಾಮ ಮನಮೋಹಕವಾಗಿರುವ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. 27 ಮೀಟರ್ ಎತ್ತರದಿಂದ ನೀರು ಜಿಗಿಯುತ್ತಿದ್ದು, ಪ್ರವಾಸಿಗರು ಸೆಲ್ಫಿ ತೆಗೆದುಕೊಂಡು ಜಲಾಶಯದ ಸೊಬಗನ್ನು ಸವಿಯುತ್ತಿದ್ದಾರೆ.

ಮಳೆ ಹೀಗೆಯೇ ಮುಂದುವರಿದರೆ ವೀಕೆಂಡ್‌ನಲ್ಲಿ ಈ ಜಲಪಾತಕ್ಕೆ ಇನ್ನೂ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಯಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 hour ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

2 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

23 hours ago