ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಶನಿವಾರದಿಂದ ಸತತ ಮೂರು ದಿನಗಳ ಕಾಲ ಮಳೆ ಸುರಿದಿದ್ದು, ಹಠಾತ್ ಪ್ರವಾಹ ಮತ್ತು ಭೂಕುಸಿತಗಳು, ಮನೆಗಳಿಗೆ ಹಾನಿ ಮತ್ತು ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಅಹಿತಕರ ಫಟನೆಯಿಂದಾಗಿ ಹಿಮಾಚಲ ಪ್ರದೇಶದ ಕುಟುಂಬವೊಂದು ಮನೆಯಿಂದ ಹೊರಗಡೆ ಬರದೆ, ಮನೆಯೊಳಗೆ ಕುಳಿತು ವಿಡಿಯೋ ಕಾಲ್ ಮೂಲಕ ಮದುವೆ ಕಾರ್ಯ ನೆರವೇರಿಸಿದೆ.
ಶಿಮ್ಲಾದ ಕೊಟ್ಗಢ್ನಿಂದ ಶಿವಾನಿ ಠಾಕೂರ್ ಅವರನ್ನು ಆಶಿಶ್ ಸಿಂಘಾ ಕುಲುವಿನ ಭುಂಟರ್ನಲ್ಲಿ ಮದುವೆಯಾಗಬೇಕಿತ್ತು. ಇದಕ್ಕಾಗಿ ಮದುವೆಯ ದಿನದಂದು ದಿಬ್ಬಣ ಹೊರಡಲು ಸಕಲ ಸಿದ್ದತೆಯನ್ನು ಮಾಡಲಾಗಿತ್ತು. ಆದರೆ ಬಿಟ್ಟು ಬಿಡದೇ ಕಾಡಿದ ಮಳೆಯಿಂದಾಗಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮದುವೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವರ ಆಶಿಶ್ ಸಿಂಘಾ ಸೋಮವಾರ ಮದುವೆ ಮೆರವಣಿಗೆಯೊಂದಿಗೆ ಭುಂತರ್ ತಲುಪಬೇಕಿತ್ತು. ಹವಾಮಾನ ವೈಪರೀತ್ಯದಿಂದ ಎದುರಾಗುವ ಸವಾಲುಗಳ ಜೊತೆಗೆ ಅತಿಥಿಗಳ ಸುರಕ್ಷತೆಯ ಕಾರಣದಿಂದಾಗಿ ವಿವಾಹವನ್ನು ಆನ್ಲೈನ್ನಲ್ಲಿ ನಡೆಸುವ ನಿರ್ಧಾರಕ್ಕೆ ಬಂದೆವು ಎಂದು ಕುಟುಂಬ ಸದಸ್ಯರು ಹೇಳಿಕೊಂಡಿದ್ದಾರೆ.
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…