ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಶನಿವಾರದಿಂದ ಸತತ ಮೂರು ದಿನಗಳ ಕಾಲ ಮಳೆ ಸುರಿದಿದ್ದು, ಹಠಾತ್ ಪ್ರವಾಹ ಮತ್ತು ಭೂಕುಸಿತಗಳು, ಮನೆಗಳಿಗೆ ಹಾನಿ ಮತ್ತು ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಅಹಿತಕರ ಫಟನೆಯಿಂದಾಗಿ ಹಿಮಾಚಲ ಪ್ರದೇಶದ ಕುಟುಂಬವೊಂದು ಮನೆಯಿಂದ ಹೊರಗಡೆ ಬರದೆ, ಮನೆಯೊಳಗೆ ಕುಳಿತು ವಿಡಿಯೋ ಕಾಲ್ ಮೂಲಕ ಮದುವೆ ಕಾರ್ಯ ನೆರವೇರಿಸಿದೆ.
ಶಿಮ್ಲಾದ ಕೊಟ್ಗಢ್ನಿಂದ ಶಿವಾನಿ ಠಾಕೂರ್ ಅವರನ್ನು ಆಶಿಶ್ ಸಿಂಘಾ ಕುಲುವಿನ ಭುಂಟರ್ನಲ್ಲಿ ಮದುವೆಯಾಗಬೇಕಿತ್ತು. ಇದಕ್ಕಾಗಿ ಮದುವೆಯ ದಿನದಂದು ದಿಬ್ಬಣ ಹೊರಡಲು ಸಕಲ ಸಿದ್ದತೆಯನ್ನು ಮಾಡಲಾಗಿತ್ತು. ಆದರೆ ಬಿಟ್ಟು ಬಿಡದೇ ಕಾಡಿದ ಮಳೆಯಿಂದಾಗಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮದುವೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವರ ಆಶಿಶ್ ಸಿಂಘಾ ಸೋಮವಾರ ಮದುವೆ ಮೆರವಣಿಗೆಯೊಂದಿಗೆ ಭುಂತರ್ ತಲುಪಬೇಕಿತ್ತು. ಹವಾಮಾನ ವೈಪರೀತ್ಯದಿಂದ ಎದುರಾಗುವ ಸವಾಲುಗಳ ಜೊತೆಗೆ ಅತಿಥಿಗಳ ಸುರಕ್ಷತೆಯ ಕಾರಣದಿಂದಾಗಿ ವಿವಾಹವನ್ನು ಆನ್ಲೈನ್ನಲ್ಲಿ ನಡೆಸುವ ನಿರ್ಧಾರಕ್ಕೆ ಬಂದೆವು ಎಂದು ಕುಟುಂಬ ಸದಸ್ಯರು ಹೇಳಿಕೊಂಡಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…