ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಶನಿವಾರದಿಂದ ಸತತ ಮೂರು ದಿನಗಳ ಕಾಲ ಮಳೆ ಸುರಿದಿದ್ದು, ಹಠಾತ್ ಪ್ರವಾಹ ಮತ್ತು ಭೂಕುಸಿತಗಳು, ಮನೆಗಳಿಗೆ ಹಾನಿ ಮತ್ತು ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಅಹಿತಕರ ಫಟನೆಯಿಂದಾಗಿ ಹಿಮಾಚಲ ಪ್ರದೇಶದ ಕುಟುಂಬವೊಂದು ಮನೆಯಿಂದ ಹೊರಗಡೆ ಬರದೆ, ಮನೆಯೊಳಗೆ ಕುಳಿತು ವಿಡಿಯೋ ಕಾಲ್ ಮೂಲಕ ಮದುವೆ ಕಾರ್ಯ ನೆರವೇರಿಸಿದೆ.
ಶಿಮ್ಲಾದ ಕೊಟ್ಗಢ್ನಿಂದ ಶಿವಾನಿ ಠಾಕೂರ್ ಅವರನ್ನು ಆಶಿಶ್ ಸಿಂಘಾ ಕುಲುವಿನ ಭುಂಟರ್ನಲ್ಲಿ ಮದುವೆಯಾಗಬೇಕಿತ್ತು. ಇದಕ್ಕಾಗಿ ಮದುವೆಯ ದಿನದಂದು ದಿಬ್ಬಣ ಹೊರಡಲು ಸಕಲ ಸಿದ್ದತೆಯನ್ನು ಮಾಡಲಾಗಿತ್ತು. ಆದರೆ ಬಿಟ್ಟು ಬಿಡದೇ ಕಾಡಿದ ಮಳೆಯಿಂದಾಗಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮದುವೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವರ ಆಶಿಶ್ ಸಿಂಘಾ ಸೋಮವಾರ ಮದುವೆ ಮೆರವಣಿಗೆಯೊಂದಿಗೆ ಭುಂತರ್ ತಲುಪಬೇಕಿತ್ತು. ಹವಾಮಾನ ವೈಪರೀತ್ಯದಿಂದ ಎದುರಾಗುವ ಸವಾಲುಗಳ ಜೊತೆಗೆ ಅತಿಥಿಗಳ ಸುರಕ್ಷತೆಯ ಕಾರಣದಿಂದಾಗಿ ವಿವಾಹವನ್ನು ಆನ್ಲೈನ್ನಲ್ಲಿ ನಡೆಸುವ ನಿರ್ಧಾರಕ್ಕೆ ಬಂದೆವು ಎಂದು ಕುಟುಂಬ ಸದಸ್ಯರು ಹೇಳಿಕೊಂಡಿದ್ದಾರೆ.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…