srivathsvaasrivathsvaa
ಮೈಸೂರು : ಧರ್ಮಸ್ಥಳ ಅಸಹಜ ಸಾವು ಪ್ರಕರಣ ಕುರಿತು ರಾಜ್ಯ ಸರ್ಕಾರ ರಚಿಸಿರುವರು ಎಸ್ಐಟಿ ತನಿಖೆಯಿಂದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಧರ್ಮಸ್ಥಳಕ್ಕೆ ಅಪಪ್ರಚಾರವಾಗುತ್ತಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಅಪ ಪ್ರಚಾರ ಮಾಡಲು ಬಿಡಲ್ಲ. ಮಂಜುನಾಥ್ ಸ್ವಾಮಿ ಅಡಿಯಲ್ಲಿ ಹೆಣ ಇದೆ ಅಂತ ಅಂದ್ರೆ ತಗೆಸಿಬಿಡ್ತಾರಾ.? ಎಂದು ಖಾರವಾಗಿ ಪ್ರತಿಕ್ರಿಯಿದ್ದಾರೆ.
ರಾಜ್ಯ ಸರ್ಕಾರದ ಸಹಾನುಭೂತಿಯಿಂದ ಇಷ್ಟೇಲ್ಲ ನಡೆಯುತ್ತಿದೆ. ಮೈಸೂರು ಮುಡಾ ಹಗರಣ, ಅಕ್ರಮ ರೆಸಾರ್ಟ್ ಹಗರಣ, ಕೋಟ್ಯಾಂತರ ರೂಪಾಯಿ ಡ್ರಗ್ಸ್ ಕೇಸ್ ಆಯಿತು, ಇದೆಲ್ಲವನ್ನ ಎಸ್ಐಟಿಗೆ ವಹಿಸಿದ್ರಾ.? ಇಲ್ಲ ಆದರೆ, ಆದರೆ ಧರ್ಮಸ್ಥಳಕ್ಕೆ ಯಾಕೆ ಇಷ್ಟು ಮುತುವರ್ಜಿ? ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಮಾಡುವವರ ವಿರುದ್ಧ ಸದಾ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
ಇನ್ನೂ ಸಚಿವ ರಾಜಣ್ಣ ವಜಾ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕರು, ಸಚಿವ ರಾಜಣ್ಣ ಸತ್ಯ ಹೇಳಿದ್ದೇ ತಪ್ಪಾ.? ಸತ್ಯ ಹೇಳಿದ್ದಕ್ಕೆ ವಜಾ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ.? ರಾಜಣ್ಣ ಅವರ ಅಧ್ಯಕ್ಷರು ಹೇಳಿದ್ದನ್ನ ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಸಂಪುಟದಿಂದ ಕಿತ್ತು ಹಾಕಿದ್ದಾರೆ. ಇದು ಒಬ್ಬ ಹಿಂದುಳಿದ ನಾಯಕನಿಗೆ ಮಾಡಿದ ಅಪಮಾನ ಎಂದು ಹೇಳಿದರು.
ನಟ ದರ್ಶನ್ ಜಾಮೀನು ಅರ್ಜಿ ವಜಾ ವಿಚಾರ ಮಾತನಾಡಿ, ಇದು ಸತ್ಯಕ್ಕೆ ಸಂದ ಜಯ. ಸುಪ್ರೀಂ ನೀಡಿದ ತೀರ್ಪನ್ನ ಯಾರಾದರು ಪ್ರಶ್ನೆ ಮಾಡಲಿಕ್ಕೆ ಸಾಧ್ಯನಾ? ಸುಪ್ರೀಂ ಕೋರ್ಟ್ ಎಲ್ಲವನ್ನೂ ಅವಲೋಕಿಸಿ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಒಂದೆ. ಈ ತೀರ್ಪುನ್ನ ನಾನು ಸ್ವಾಗತ ಮಾಡುತ್ತೇನೆ ಎಂದರು.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…