ಮೈಸೂರು

ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ದಿಢೀರ್ ಭೇಟಿ

ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಸ್ವಚ್ಛತೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿ, ಹೆರಿಗೆ ಕೊಠಡಿ, ಪ್ರಯೋಗ ಶಾಲೆ, ಪ್ರಸಕ್ತ ಮಾಹಿತಿಯಲ್ಲಿ ಹೆರಿಗೆ ಆಗಿರುವ ಬಗ್ಗೆ ದಾಖಲಾತಿಗಳು, ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳ ದಾಖಲಾತಿ ಪುಸ್ತಕಗಳನ್ನು ಪರಿಶೀಲನೆ ನಡೆಸಿದರು.

ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರನ್ನು ಕರೆಸಿ ಈ ಆರೋಗ್ಯ ಕೇಂದ್ರಕ್ಕೆ ಈ ಭಾಗದಿಂದ ಹೆಚ್ಚು ಜನರು ಬರುತ್ತಿದ್ದು, ಹೆರಿಗೆಗೆ ಬರುವವರ ಮೇಲೆ ತೀವ್ರ ನಿಗಾ ಇಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿಯನ್ನು ಸಾಧಿಸಬೇಕು. ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಹಾಕಬೇಕು. ಮುಂದಿನ ದಿನಗಳಲ್ಲಿ ಯಾವುದೇ ದೂರುಗಳು ಬರದ ಹಾಗೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ನಾಳೆಯಿಂದ ಉದ್ಘಾಟನೆ ಆಗಲಿರುವ ಗೃಹ ಆರೋಗ್ಯ ಕಾರ್ಯಕ್ರಮವನ್ನು ಚೆನ್ನಾಗಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾಆಶಿತ್ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…

1 hour ago

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…

2 hours ago

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

3 hours ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

4 hours ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

4 hours ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

4 hours ago