ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಪುರುಷೋತ್ತಮ್ ಹೇಳಿದರು.
ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್.ಧ್ರುವನಾರಾಯಣ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇವಲ ಒಂದು ಜಾತಿಗೆ ಸೀಮಿತರಾಗದೇ ಎಲ್ಲ ವರ್ಗದ ಜನರ ಏಳಿಗೆಗೆ ಶ್ರಮಿಸಿದರು. ಭ್ರಷ್ಟಾಚಾರವನ್ನು ಎಂದೂ ನಡೆಸಲಿಲ್ಲ. ಚುನಾವಣೆಯಲ್ಲಿ ಸೋತರೂ ಪ್ರವಾಸ ಮಾಡಿ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ್ದರು’ ಎಂದರು.
‘ರಾಜಕೀಯ ಜೀವನ ಸಾರ್ಥಕವಾಗಬೇಕೆಂದರೆ ಧ್ರುವ ಅವರ ದಾರಿ ನಮ್ಮದಾಗಬೇಕು. ಶೋಷಿತ ಸಮುದಾಯಗಳು ಒಂದಾಗಬೇಕು ಎನ್ನುತ್ತಿದ್ದ ಅವರು, ಸೈದ್ಧಾಂತಿಕವಾಗಿ ರಾಜಕೀಯಕ್ಕೆ ಶಕ್ತಿ ಕೊಡಬೇಕು ಎಂದು ಪ್ರತಿಪಾದಿಸುತ್ತಿದ್ದರು. ದೊಡ್ಡ ಸ್ಥಾನಕ್ಕೇರುವ ಕನಸು ಕಂಡಿದ್ದ ನಮ್ಮೆಲ್ಲರಿಗೂ ಅವರ ಹಠಾತ್ ನಿಧನ ಶೂನ್ಯ ಮೂಡಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಚಾಮರಾಜನಗರ ಅಭಿವೃದ್ಧಿ ಪಥದಲ್ಲಿ ಸಾಗಿದ್ದರೆ ಧ್ರುವನಾರಾಯಣ ಕೊಡುಗೆ ಅನನ್ಯ. ಶಿಕ್ಷಣ, ಕುಡಿಯುವ ನೀರು, ಮೂಲಸೌಕರ್ಯದಲ್ಲಿ ಮುಂದಿದೆ. ಅವರ ಪುತ್ರ ದರ್ಶನ್ ಕೂಡ ತಂದೆಯ ಮಾರ್ಗದಲ್ಲೇ ಸಾಗಲಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು’ ಎಂದರು.
ಮುಖಂಡರಾದ ಮಂಜುಳಾ ಮಂಜುನಾಥ್, ಜವರಪ್ಪ, ಕೃಷ್ಣಮೂರ್ತಿ ಚಮರಂ, ಅಮ್ಮ ರಾಮಚಂದ್ರ ಇದ್ದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…