ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಪುರುಷೋತ್ತಮ್ ಹೇಳಿದರು.
ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್.ಧ್ರುವನಾರಾಯಣ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇವಲ ಒಂದು ಜಾತಿಗೆ ಸೀಮಿತರಾಗದೇ ಎಲ್ಲ ವರ್ಗದ ಜನರ ಏಳಿಗೆಗೆ ಶ್ರಮಿಸಿದರು. ಭ್ರಷ್ಟಾಚಾರವನ್ನು ಎಂದೂ ನಡೆಸಲಿಲ್ಲ. ಚುನಾವಣೆಯಲ್ಲಿ ಸೋತರೂ ಪ್ರವಾಸ ಮಾಡಿ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ್ದರು’ ಎಂದರು.
‘ರಾಜಕೀಯ ಜೀವನ ಸಾರ್ಥಕವಾಗಬೇಕೆಂದರೆ ಧ್ರುವ ಅವರ ದಾರಿ ನಮ್ಮದಾಗಬೇಕು. ಶೋಷಿತ ಸಮುದಾಯಗಳು ಒಂದಾಗಬೇಕು ಎನ್ನುತ್ತಿದ್ದ ಅವರು, ಸೈದ್ಧಾಂತಿಕವಾಗಿ ರಾಜಕೀಯಕ್ಕೆ ಶಕ್ತಿ ಕೊಡಬೇಕು ಎಂದು ಪ್ರತಿಪಾದಿಸುತ್ತಿದ್ದರು. ದೊಡ್ಡ ಸ್ಥಾನಕ್ಕೇರುವ ಕನಸು ಕಂಡಿದ್ದ ನಮ್ಮೆಲ್ಲರಿಗೂ ಅವರ ಹಠಾತ್ ನಿಧನ ಶೂನ್ಯ ಮೂಡಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಚಾಮರಾಜನಗರ ಅಭಿವೃದ್ಧಿ ಪಥದಲ್ಲಿ ಸಾಗಿದ್ದರೆ ಧ್ರುವನಾರಾಯಣ ಕೊಡುಗೆ ಅನನ್ಯ. ಶಿಕ್ಷಣ, ಕುಡಿಯುವ ನೀರು, ಮೂಲಸೌಕರ್ಯದಲ್ಲಿ ಮುಂದಿದೆ. ಅವರ ಪುತ್ರ ದರ್ಶನ್ ಕೂಡ ತಂದೆಯ ಮಾರ್ಗದಲ್ಲೇ ಸಾಗಲಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು’ ಎಂದರು.
ಮುಖಂಡರಾದ ಮಂಜುಳಾ ಮಂಜುನಾಥ್, ಜವರಪ್ಪ, ಕೃಷ್ಣಮೂರ್ತಿ ಚಮರಂ, ಅಮ್ಮ ರಾಮಚಂದ್ರ ಇದ್ದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…