ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಪುರುಷೋತ್ತಮ್ ಹೇಳಿದರು.
ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್.ಧ್ರುವನಾರಾಯಣ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇವಲ ಒಂದು ಜಾತಿಗೆ ಸೀಮಿತರಾಗದೇ ಎಲ್ಲ ವರ್ಗದ ಜನರ ಏಳಿಗೆಗೆ ಶ್ರಮಿಸಿದರು. ಭ್ರಷ್ಟಾಚಾರವನ್ನು ಎಂದೂ ನಡೆಸಲಿಲ್ಲ. ಚುನಾವಣೆಯಲ್ಲಿ ಸೋತರೂ ಪ್ರವಾಸ ಮಾಡಿ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ್ದರು’ ಎಂದರು.
‘ರಾಜಕೀಯ ಜೀವನ ಸಾರ್ಥಕವಾಗಬೇಕೆಂದರೆ ಧ್ರುವ ಅವರ ದಾರಿ ನಮ್ಮದಾಗಬೇಕು. ಶೋಷಿತ ಸಮುದಾಯಗಳು ಒಂದಾಗಬೇಕು ಎನ್ನುತ್ತಿದ್ದ ಅವರು, ಸೈದ್ಧಾಂತಿಕವಾಗಿ ರಾಜಕೀಯಕ್ಕೆ ಶಕ್ತಿ ಕೊಡಬೇಕು ಎಂದು ಪ್ರತಿಪಾದಿಸುತ್ತಿದ್ದರು. ದೊಡ್ಡ ಸ್ಥಾನಕ್ಕೇರುವ ಕನಸು ಕಂಡಿದ್ದ ನಮ್ಮೆಲ್ಲರಿಗೂ ಅವರ ಹಠಾತ್ ನಿಧನ ಶೂನ್ಯ ಮೂಡಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಚಾಮರಾಜನಗರ ಅಭಿವೃದ್ಧಿ ಪಥದಲ್ಲಿ ಸಾಗಿದ್ದರೆ ಧ್ರುವನಾರಾಯಣ ಕೊಡುಗೆ ಅನನ್ಯ. ಶಿಕ್ಷಣ, ಕುಡಿಯುವ ನೀರು, ಮೂಲಸೌಕರ್ಯದಲ್ಲಿ ಮುಂದಿದೆ. ಅವರ ಪುತ್ರ ದರ್ಶನ್ ಕೂಡ ತಂದೆಯ ಮಾರ್ಗದಲ್ಲೇ ಸಾಗಲಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು’ ಎಂದರು.
ಮುಖಂಡರಾದ ಮಂಜುಳಾ ಮಂಜುನಾಥ್, ಜವರಪ್ಪ, ಕೃಷ್ಣಮೂರ್ತಿ ಚಮರಂ, ಅಮ್ಮ ರಾಮಚಂದ್ರ ಇದ್ದರು.
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…