ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಪುರುಷೋತ್ತಮ್ ಹೇಳಿದರು.
ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್.ಧ್ರುವನಾರಾಯಣ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇವಲ ಒಂದು ಜಾತಿಗೆ ಸೀಮಿತರಾಗದೇ ಎಲ್ಲ ವರ್ಗದ ಜನರ ಏಳಿಗೆಗೆ ಶ್ರಮಿಸಿದರು. ಭ್ರಷ್ಟಾಚಾರವನ್ನು ಎಂದೂ ನಡೆಸಲಿಲ್ಲ. ಚುನಾವಣೆಯಲ್ಲಿ ಸೋತರೂ ಪ್ರವಾಸ ಮಾಡಿ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ್ದರು’ ಎಂದರು.
‘ರಾಜಕೀಯ ಜೀವನ ಸಾರ್ಥಕವಾಗಬೇಕೆಂದರೆ ಧ್ರುವ ಅವರ ದಾರಿ ನಮ್ಮದಾಗಬೇಕು. ಶೋಷಿತ ಸಮುದಾಯಗಳು ಒಂದಾಗಬೇಕು ಎನ್ನುತ್ತಿದ್ದ ಅವರು, ಸೈದ್ಧಾಂತಿಕವಾಗಿ ರಾಜಕೀಯಕ್ಕೆ ಶಕ್ತಿ ಕೊಡಬೇಕು ಎಂದು ಪ್ರತಿಪಾದಿಸುತ್ತಿದ್ದರು. ದೊಡ್ಡ ಸ್ಥಾನಕ್ಕೇರುವ ಕನಸು ಕಂಡಿದ್ದ ನಮ್ಮೆಲ್ಲರಿಗೂ ಅವರ ಹಠಾತ್ ನಿಧನ ಶೂನ್ಯ ಮೂಡಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಚಾಮರಾಜನಗರ ಅಭಿವೃದ್ಧಿ ಪಥದಲ್ಲಿ ಸಾಗಿದ್ದರೆ ಧ್ರುವನಾರಾಯಣ ಕೊಡುಗೆ ಅನನ್ಯ. ಶಿಕ್ಷಣ, ಕುಡಿಯುವ ನೀರು, ಮೂಲಸೌಕರ್ಯದಲ್ಲಿ ಮುಂದಿದೆ. ಅವರ ಪುತ್ರ ದರ್ಶನ್ ಕೂಡ ತಂದೆಯ ಮಾರ್ಗದಲ್ಲೇ ಸಾಗಲಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು’ ಎಂದರು.
ಮುಖಂಡರಾದ ಮಂಜುಳಾ ಮಂಜುನಾಥ್, ಜವರಪ್ಪ, ಕೃಷ್ಣಮೂರ್ತಿ ಚಮರಂ, ಅಮ್ಮ ರಾಮಚಂದ್ರ ಇದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…