ಮೈಸೂರು: ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಬಿಜೆಪಿ ಅವನನ್ನು ಡಿಜಿಪಿ ಮಾಡಿದ್ಯಾ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರ ಮುಂದಿಟ್ಟುಕೊಂಡು ಈ ಭಾಗದಲ್ಲಿ ಕೋಮು ಗಲಭೆ ಹರಡಲು ಸಾಧ್ಯವಿಲ್ಲ. ಇದು ಕರಾವಳಿ ಭಾಗವಲ್ಲ, ಇಲ್ಲಿ ನೀವು ಕೋಮು ಭಾವನೆ ಕೆರಳಿಸಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಾಂತಿ ಕದಡಲು ಮುಂದಾಗಿರುವ ಆರೋಪದಡಿ ಪೊಲೀಸರ ಬಳಿ ಪ್ರಕರಣ ದಾಖಲಿಸುತ್ತೇವೆ. ಕೊಲೆಯ A4 ಆರೋಪಿ ಬಿಜೆಪಿ ಪಾಲಿಕೆ ಸದಸ್ಯೆಯ ತಮ್ಮನಾಗಿದ್ದು ಇದಕ್ಕೇನು ಹೇಳುತ್ತೀರಿ? A4 ಆರೋಪಿಯೇ ಚಕ್ರವರ್ತಿ ಸೂಲಿಬೆಲೆಯನ್ನು ರಾತ್ರೋರಾತ್ರಿ ಕರೆಸಿದ್ದಾನೆ. ಚಕ್ರವರ್ತಿ ಸೂಲಿಬೆಲೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.
ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಸದಸ್ಯನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಹತಾಶರಾಗಿದ್ದಾರೆ. ಕಾಂಗ್ರೆಸ್ ವರ್ಚಸ್ಸು ದಿನೇ ದಿನೇ ವೃದ್ದಿಯಾಗುತ್ತಿದೆ. ಕೇಂದ್ರ ನಾಯಕರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ.
ಬಿಜೆಪಿಗೆ ಜನರೇ ಪಾಠ ಕಲಿಸ್ತಾರೆ
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾವಿರಾರು ಕೊಲೆಗಳಾಗಿವೆ. ಆದರೂ ಆಯ್ದ ಕೆಲವರಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಟಿ ನರಸೀಪುರ ಕೊಲೆ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ.
ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ. ಸುನಿಲ್ ಬೋಸ್ ಜೊತೆ ಫೋಟೋ ತೆಗೆಸಿಕೊಂಂಡ ಮಾತ್ರಕ್ಕೆ ಆರೋಪ ಹೊರಿಸುವುದು ಎಷ್ಟು ಸರಿ? ಪ್ರಧಾನಿ ಮೋದಿ ಮಂಡ್ಯಗೆ ಬಂದಿದ್ದಾಗ ರೌಡಿ ಶೀಟರ್ ಫೈಟರ್ ರವಿ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾದ್ರೇ ಫೈಟರ್ ರವಿ ಮಾಡಿರುವ ತಪ್ಪುಗಳಿಗೆ ಮೋದಿಯನ್ನು ಹೊಣೆ ಮಾಡುತ್ತೀರಾ ಎಂದು ಎಂ ಲಕ್ಷ್ಮಣ್ ಪ್ರಶ್ನೆ ಮಾಡಿದರು.
ಸಿಟಿ ರವಿ ಒಬ್ಬ ರೌಡಿಶೀಟರ್
ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ದವೂ ಕಿಡಿಕಾರಿದ ಎಂ.ಲಕ್ಷ್ಮಣ್, ಸಿಟಿ ರವಿ ಒಬ್ಬ ರೌಡಿಶೀಟರ್. ಸಿ ಟಿ ರವಿ ಕಾರು ಹರಿಸಿ ನಾಲ್ವರನ್ನು ಕೊಂದ ಆರೋಪ ಹೊತ್ತಿದ್ದಾರೆ. ಅವರನ್ನು ಬಿಜೆಪಿ ಸತ್ಯಶೋಧನಾ ಸಮಿತಿಗೆ ಮುಖ್ಯಸ್ಥನನ್ನಾಗಿ ನೇಮಿಸಲಾಗಿದೆ.
ಇನ್ನು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೂಡ ಹಲವಾರು ಪ್ರಕರಣ ದಾಖಲಾಗಿವೆ. ಅವರನ್ನು ಸತ್ಯಶೋಧನಾ ನಮಿತಿ ಸದಸ್ಯನಾಗಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಆರೋಪಕ್ಕೆ ಗುರಿಯಾಗಿರುವ ಇಂತಹವರು ಯಾವ ಸತ್ಯಶೋಧನೆ ಮಾಡುತ್ತಾರೆ? ಎಂದು ಲೇವಡಿ ಮಾಡಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…