ಮೈಸೂರು

ಬಿಜೆಪಿ ಚಕ್ರವರ್ತಿ ಸೂಲಿಬೆಲೆಯನ್ನು ಡಿಜಿಪಿ ಮಾಡಿದ್ಯಾ?: ಲಕ್ಷ್ಮಣ್ ಲೇವಡಿ

ಮೈಸೂರು: ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಬಿಜೆಪಿ ಅವನನ್ನು ಡಿಜಿಪಿ ಮಾಡಿದ್ಯಾ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರ ಮುಂದಿಟ್ಟುಕೊಂಡು ಈ ಭಾಗದಲ್ಲಿ ಕೋಮು ಗಲಭೆ ಹರಡಲು ಸಾಧ್ಯವಿಲ್ಲ. ಇದು ಕರಾವಳಿ ಭಾಗವಲ್ಲ, ಇಲ್ಲಿ ನೀವು ಕೋಮು ಭಾವನೆ ಕೆರಳಿಸಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಾಂತಿ ಕದಡಲು ಮುಂದಾಗಿರುವ ಆರೋಪದಡಿ ಪೊಲೀಸರ ಬಳಿ ಪ್ರಕರಣ ದಾಖಲಿಸುತ್ತೇವೆ. ಕೊಲೆಯ A4 ಆರೋಪಿ ಬಿಜೆಪಿ ಪಾಲಿಕೆ ಸದಸ್ಯೆಯ ತಮ್ಮನಾಗಿದ್ದು ಇದಕ್ಕೇನು ಹೇಳುತ್ತೀರಿ? A4 ಆರೋಪಿಯೇ ಚಕ್ರವರ್ತಿ ಸೂಲಿಬೆಲೆಯನ್ನು ರಾತ್ರೋರಾತ್ರಿ ಕರೆಸಿದ್ದಾನೆ. ಚಕ್ರವರ್ತಿ ಸೂಲಿಬೆಲೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.

ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಸದಸ್ಯನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಹತಾಶರಾಗಿದ್ದಾರೆ. ಕಾಂಗ್ರೆಸ್ ವರ್ಚಸ್ಸು ದಿನೇ ದಿನೇ ವೃದ್ದಿಯಾಗುತ್ತಿದೆ. ಕೇಂದ್ರ ನಾಯಕರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ.

ಬಿಜೆಪಿಗೆ ಜನರೇ ಪಾಠ ಕಲಿಸ್ತಾರೆ

ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾವಿರಾರು ಕೊಲೆಗಳಾಗಿವೆ. ಆದರೂ ಆಯ್ದ ಕೆಲವರಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಟಿ ನರಸೀಪುರ ಕೊಲೆ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ.

ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ. ಸುನಿಲ್ ಬೋಸ್ ಜೊತೆ ಫೋಟೋ ತೆಗೆಸಿಕೊಂಂಡ ಮಾತ್ರಕ್ಕೆ ಆರೋಪ ಹೊರಿಸುವುದು ಎಷ್ಟು ಸರಿ? ಪ್ರಧಾನಿ ಮೋದಿ ಮಂಡ್ಯಗೆ ಬಂದಿದ್ದಾಗ ರೌಡಿ ಶೀಟರ್ ಫೈಟರ್ ರವಿ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾದ್ರೇ ಫೈಟರ್ ರವಿ ಮಾಡಿರುವ ತಪ್ಪುಗಳಿಗೆ ಮೋದಿಯನ್ನು ಹೊಣೆ ಮಾಡುತ್ತೀರಾ ಎಂದು ಎಂ ಲಕ್ಷ್ಮಣ್ ಪ್ರಶ್ನೆ ಮಾಡಿದರು.

ಸಿಟಿ ರವಿ ಒಬ್ಬ ರೌಡಿಶೀಟರ್

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ದವೂ ಕಿಡಿಕಾರಿದ ಎಂ.ಲಕ್ಷ್ಮಣ್, ಸಿಟಿ ರವಿ ಒಬ್ಬ ರೌಡಿಶೀಟರ್. ಸಿ ಟಿ ರವಿ ಕಾರು ಹರಿಸಿ ನಾಲ್ವರನ್ನು ಕೊಂದ ಆರೋಪ ಹೊತ್ತಿದ್ದಾರೆ. ಅವರನ್ನು ಬಿಜೆಪಿ ಸತ್ಯಶೋಧನಾ ಸಮಿತಿಗೆ ಮುಖ್ಯಸ್ಥನನ್ನಾಗಿ ನೇಮಿಸಲಾಗಿದೆ.

ಇನ್ನು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೂಡ ಹಲವಾರು ಪ್ರಕರಣ ದಾಖಲಾಗಿವೆ. ಅವರನ್ನು ಸತ್ಯಶೋಧನಾ ನಮಿತಿ ಸದಸ್ಯನಾಗಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಆರೋಪಕ್ಕೆ ಗುರಿಯಾಗಿರುವ ಇಂತಹವರು ಯಾವ ಸತ್ಯಶೋಧನೆ ಮಾಡುತ್ತಾರೆ? ಎಂದು ಲೇವಡಿ ಮಾಡಿದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago