ಮೈಸೂರು

ಬೆತ್ತಲೆ ಜಗತ್ತು ಪುಸ್ತಕಕ್ಕೆ ಬೂಕರ್‌ ಸಿಕ್ಕಿದ್ಯಾ? : ಪ್ರತಾಪ್‌ ಸಿಂಹಗೆ ವಿಶ್ವನಾಥ್‌ ಪ್ರಶ್ನೆ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವನ್ನು ಸ್ವಾಗತಿಸಿರುವ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್‌, ಆಕ್ಷೇಪ ಎತ್ತಿರುವ ಪ್ರತಾಪ್‌ ಸಿಂಹ ಹಾಗೂ ಇತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ವಿಶ್ವನಾಥ್‌, ಬಾನು ಮುಷ್ತಾಕ್ ಅವರ ಎದೆಯ ಹಣತೆ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಮೂಲಕ ಬಾನು ಮುಷ್ತಾಕ್ ಅವರು ಕನ್ನಡವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಬಾನು ಮುಷ್ತಾಕ್ ಕೃತಿಯನ್ನು ಇಂಗ್ಲಿಷ್ ಗೆ ಭಾಷಾಂತರ ಮಾಡಿದ ದೀಪಾಬಸ್ತಿಯವರಿಗೂ ಬೂಕರ್ ಪ್ರಶಸ್ತಿ ನೀಡಲಾಗಿದೆ. ಇದು ಸಂತಸನ ವಿಚಾರ ಎಂದಿದ್ದಾರೆ.

ನಿನ್ನ ಬೆತ್ತಲೆ ಜಗತ್ತು ಪುಸ್ತಕಕ್ಕೆ ಬೂಕರ್‌ ಸಿಕ್ಕಿದ್ಯಾ ಹೇಳು ಎಂದು ಮಾಜಿ ಸಂಸದ ಪ್ರತಾಪ ಸಿಂಹನನ್ನು ಪ್ರಶ್ನಿಸಿದ ಅವರು, ಚರಿತ್ರೆಯನ್ನು ತಿಳಿದು ಮಾತನಾಡಬೇಕು. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್‌ರನ್ನು ಮಹಾರಾಜರೂ ಅಂಬಾರಿ ಮೇಲೆ ಪಕ್ಕದಲ್ಲಿ ಕೂರಿಸಿಕೊಳ್ಳುತ್ತಿದ್ದರು. ಇದು ಸಮಾನತೆಯ ದೇಶ ಎಂದು ಹೇಳಿದರು.

ಬಾನು ಹಾಗೂ ದೀಪ ಬಸ್ತಿ ಇಬ್ಬರಿಗೂ ಸಮಾನವಾಗಿ ಬೂಕರ್ ಪ್ರಶಸ್ತಿ ನೀಡಲಾಗಿದೆ. ಬಾನು ಮುಷ್ತಾಕ್ ಬಹಳ ಸಾಧನೆ ಮಾಡಿದ್ದಾರೆ. ರೈತ ಚಳವಳಿ, ಭಾಷಾ ಚಳವಳಿ, ವಕೀಲ ವೃತ್ತಿ ಸೇರಿದಂತೆ ಹಲವಾರು ಹೋರಾಟಗಳನ್ನು ಮಾಡಿದ್ದಾರೆ. ಆದರೆ ಕೆಲವರು ಇವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮದು ಬಹುತ್ವದ ದೇಶವಾಗಿದೆ. ಮಂತ್ರಿಗಳಾಗಿದ್ದವರೂ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪ್ರತಾಪ್ ಸಿಂಹ ಪ್ರತಾಪಿಯಂತೆ ಮಾತನಾಡುತ್ತಿದ್ದಾರೆ. ಪಾರ್ಲಿಮೆಂಟ್ ಮೆಂಬರ್ ಆಗಿದ್ದವರು ಮಹಿಳಾ ಸಾಧಕಿಯ ವಿರುದ್ಧ ಮಾತನಾಡುವುದು ಸರಿಯಲ್ಲ. ಈ ಮೂಲಕ ಮೈಸೂರನ್ನು ಏನು ಮಾಡಬೇಕು ಎಂದುಕೊಂಡಿದ್ದೀರಿ?. ದಸರಾ ಎಂದರೆ ಕಡಲೆಕಾಯಿ ಮಾರುವವನಿಂದ ಹಿಡಿದು ಸಿಹಿ ಮಾರಾಟ ಮಾಡುವವರೆಗೆ ಎಲ್ಲಾ ವರ್ಗದ ಜನರಿಗೆ, ಪ್ರವಾಸೋದ್ಯಮಕ್ಕೆ ಆಸರೆ ನೀಡುತ್ತದೆ. ಆರ್.ಅಶೋಕ್ ಮಾತು ಶೇಮ್ ಶೇಮ್. ವಿರೋಧ ಪಕ್ಷದ ನಾಯಕ‌ನಾಗಿದ್ದುಕೊಂಡು ಜನಾಂಗೀಯ ದ್ವೇಷ ಹಂಚುವ ಮಾತನಾಡಬಾರದು. ಚಾಮುಂಡಿ ಬೆಟ್ಟ ‌ಹಿಂದೂಗಳಿಗೆ ಸೇರಿದ್ದಲ್ಲ ಎನ್ನುವುದು ತಪ್ಪು, ಅದೇ ರೀತಿ ಹಿಂದೂಗಳಿಗೆ ಸೇರಿದ್ದು ಎನ್ನುವುದು ಸಹ ತಪ್ಪು. ಪೈಪೋಟಿಯ ಮೇಲೆ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು‌ ಎಂದು ಪ್ರತಾಪ್‌ ಸಿಂಗ ಹಾಗೂ ಆರ್.‌ಅಶೋಕ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಎಂ ಸ್ಪಷ್ಟನೆ ನೀಡಲಿ
ಇನ್ನು ಮುಂದುವರಿದು ಮಾತನಾಡಿದ ಅವರು, ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಲು ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು. ಸರ್ಕಾರ ಆಹ್ವಾನಿಸಿರುವ ಬಗ್ಗೆ ಮಾತನಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಮಾತನಾಡಬೇಕು. ಬಾನು ಮುಷ್ತಾಕ್ ಜೊತೆಗೆ ದೀಪಾ ಬಸ್ತಿಯವರನ್ನು ಕೂಡ ಕರೆದು ಅರಮನೆ ಮುಂಭಾಗದಲ್ಲಿ ಸನ್ಮಾನಿಸಿ ಅಭಿನಂದಿಸಬೇಕು. ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದ ಬಳಿಕ ಅರಮನೆ ಆವರಣದಲ್ಲಿ ಇಬ್ಬರನ್ನೂ ಸನ್ಮಾನಿಸಿ ಅಭಿನಂದಿಸಬೇಕು. ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಬಾನು ಮುಷ್ತಾಕ್ ಚಾಮುಂಡಿ ಬೆಟ್ಟ ಹತ್ತಲು ಬಿಡುವುದಿಲ್ಲ ಎಂದಿದ್ದಾರೆ. ಚಾಮುಂಡಿ ಬೆಟ್ಟ ಯಾವುದೇ ಒಂದು ಜಾತಿ, ಧರ್ಮದ ಆಸ್ತಿಯಲ್ಲ. ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿಯಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

1 hour ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

3 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

3 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

7 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

7 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

7 hours ago