ಮೈಸೂರು

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಿದರು. ವಿವಿಯ ಕಾರ್ಯಸೌಧಕ್ಕೆ ಆಗಮಿಸಿದ ರಾಯಭಾರಿಗಳ ನಿಯೋಗವು ವಿವಿಯ ಕುಲಸಚಿವರಾದ ಎಂ.ಕೆ.ಸವಿತಾ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

ಫ್ರಾನ್ಸ್‌ನಲ್ಲಿ ೧೦ ಸಾವಿರಕ್ಕೂ ಹೆಚ್ಚು ಭಾರತೀಯರು ವ್ಯಾಸಂಗ ಮಾಡುತ್ತಿದ್ದಾರೆ. ಅಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅವಕಾಶಗಳಿದ್ದು, ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ನಿಯೋಗವು ಮನವಿ ಮಾಡಿದೆ.

ಇದನ್ನು ಓದಿ: ʼಗ್ಯಾರಂಟಿʼ ಜನರ ಬದುಕಿನ ಆಧಾರ

ವಿವಿಯಲ್ಲಿ ಫ್ರೆಂಚ್ ಭಾಷೆ ವಿಭಾಗ ಪುನಾರಂಭಿಸಲು ಚರ್ಚೆ ನಡೆಸಲಾಗಿದೆ. ಈ ಹಿಂದೆ ಮೈಸೂರು ವಿವಿಯಲ್ಲಿ ಫ್ರೆಂಚ್ ಸೇರಿದಂತೆ ಇತರೆ ವಿದೇಶಿ ಭಾಷೆಗಳ ವಿಭಾಗಗಳನ್ನು ತೆರೆದು ಕಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಾಲಕ್ರಮೇಣ ಬೋಧಕರ ಕೊರತೆಯಿಂದಾಗಿ ವಿಭಾಗವನ್ನು ಮುಚ್ಚಲಾಗಿದೆ. ಇದೀಗ ಮತ್ತೆ ಫ್ರೆಂಚ್ ಭಾಷೆ ವಿಭಾಗ ತೆರೆಯುವ ಬಗ್ಗೆ ನಿಯೋಗ ಚರ್ಚೆ ನಡೆಸಿದೆ.

ನಿಯೋಗಕ್ಕೆ ಇದೀಗ ಪ್ರಸ್ತಾವನೆ ನೀಡಲು ತಿಳಿಸಿದ್ದೇವೆ. ಅವರ ಕೋರಿಕೆ ಮೇರೆಗೆ ಚರ್ಚಿಸಿ, ಅದು ಒಪ್ಪಿಗೆಯಾದರೆ ಒಪ್ಪಂದಕ್ಕೆ ಸಹಿ ಮಾಡಲಾಗುತ್ತದೆ ಎಂದು ಕುಲಸಚಿವರಾದ ಎಂ.ಕೆ.ಸವಿತಾ ತಿಳಿಸಿದರು.

ಫ್ರಾನ್ಸ್ಪ್ರ ತಿನಿಧಿಗಳಾದ ಆಂಥೋನಿ ಗಿಲೈಟ್, ಜೀನ್ ಮಾರ್ಕ್ ಡಿಪೈರ್, ಥಾಮಸ್ ಚೌಮೌಂಟ್ ನಿಯೋಗದಿಂದ ಭೇಟಿ ನೀಡಿದ್ದರು. ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ್, ಪ್ರಾಧ್ಯಾಪಕರಾದ ಪ್ರೊ.ಎಂ.ಎಸ್.ಸಪ್ನ, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

4 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

45 mins ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

52 mins ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

1 hour ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

2 hours ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

2 hours ago