ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಿದರು. ವಿವಿಯ ಕಾರ್ಯಸೌಧಕ್ಕೆ ಆಗಮಿಸಿದ ರಾಯಭಾರಿಗಳ ನಿಯೋಗವು ವಿವಿಯ ಕುಲಸಚಿವರಾದ ಎಂ.ಕೆ.ಸವಿತಾ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ಫ್ರಾನ್ಸ್ನಲ್ಲಿ ೧೦ ಸಾವಿರಕ್ಕೂ ಹೆಚ್ಚು ಭಾರತೀಯರು ವ್ಯಾಸಂಗ ಮಾಡುತ್ತಿದ್ದಾರೆ. ಅಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅವಕಾಶಗಳಿದ್ದು, ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ನಿಯೋಗವು ಮನವಿ ಮಾಡಿದೆ.
ಇದನ್ನು ಓದಿ: ʼಗ್ಯಾರಂಟಿʼ ಜನರ ಬದುಕಿನ ಆಧಾರ
ವಿವಿಯಲ್ಲಿ ಫ್ರೆಂಚ್ ಭಾಷೆ ವಿಭಾಗ ಪುನಾರಂಭಿಸಲು ಚರ್ಚೆ ನಡೆಸಲಾಗಿದೆ. ಈ ಹಿಂದೆ ಮೈಸೂರು ವಿವಿಯಲ್ಲಿ ಫ್ರೆಂಚ್ ಸೇರಿದಂತೆ ಇತರೆ ವಿದೇಶಿ ಭಾಷೆಗಳ ವಿಭಾಗಗಳನ್ನು ತೆರೆದು ಕಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಾಲಕ್ರಮೇಣ ಬೋಧಕರ ಕೊರತೆಯಿಂದಾಗಿ ವಿಭಾಗವನ್ನು ಮುಚ್ಚಲಾಗಿದೆ. ಇದೀಗ ಮತ್ತೆ ಫ್ರೆಂಚ್ ಭಾಷೆ ವಿಭಾಗ ತೆರೆಯುವ ಬಗ್ಗೆ ನಿಯೋಗ ಚರ್ಚೆ ನಡೆಸಿದೆ.
ನಿಯೋಗಕ್ಕೆ ಇದೀಗ ಪ್ರಸ್ತಾವನೆ ನೀಡಲು ತಿಳಿಸಿದ್ದೇವೆ. ಅವರ ಕೋರಿಕೆ ಮೇರೆಗೆ ಚರ್ಚಿಸಿ, ಅದು ಒಪ್ಪಿಗೆಯಾದರೆ ಒಪ್ಪಂದಕ್ಕೆ ಸಹಿ ಮಾಡಲಾಗುತ್ತದೆ ಎಂದು ಕುಲಸಚಿವರಾದ ಎಂ.ಕೆ.ಸವಿತಾ ತಿಳಿಸಿದರು.
ಫ್ರಾನ್ಸ್ಪ್ರ ತಿನಿಧಿಗಳಾದ ಆಂಥೋನಿ ಗಿಲೈಟ್, ಜೀನ್ ಮಾರ್ಕ್ ಡಿಪೈರ್, ಥಾಮಸ್ ಚೌಮೌಂಟ್ ನಿಯೋಗದಿಂದ ಭೇಟಿ ನೀಡಿದ್ದರು. ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ್, ಪ್ರಾಧ್ಯಾಪಕರಾದ ಪ್ರೊ.ಎಂ.ಎಸ್.ಸಪ್ನ, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಜರಿದ್ದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…