ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ.
ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಇದೀಗ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದಾರೆ. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ನಲ್ಲಿ ಇದ್ದುಕೊಂಡೇ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿದ್ದ ಕಾರಣ ಅವರ ಪರ ಕೆಲಸ ಮಾಡಿದ್ದಾರೆ. ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದು ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…