ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ.
ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಇದೀಗ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದಾರೆ. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ನಲ್ಲಿ ಇದ್ದುಕೊಂಡೇ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿದ್ದ ಕಾರಣ ಅವರ ಪರ ಕೆಲಸ ಮಾಡಿದ್ದಾರೆ. ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದು ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…