ಮೈಸೂರು

ಶಾಸಕ ಸ್ಥಾನದಿಂದ ಮುನಿರತ್ನ ವಜಾಗೊಳಿಸಿ: ಡಿಎಸ್‌ಎಸ್‌

ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು ಅವರನ್ನು ಶಾಸಕ ಸ್ಥಾನ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹ ಪಡಿಸಿದರು.

ತಿ.ನರಸೀಪುರ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾ ಸಂಚಾಲಕರಾದ ಆಲಗೂಡುಶಿ ವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುನಿರತ್ನ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಾನವ ಸರಪಳಿ ರಚಿಸಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.

ಪ್ರತಿಭಟನೆಯಲ್ಲಿ ಡಿಎಸ್‌ಎಸ್‌ ಸಂಚಾಲಕ ಬನ್ನಹಳ್ಳಿ ಸೋಮಣ್ಣ, ತಾಲ್ಲೂಕು ಸಂಚಾಲಕರಾದ ಯಾಚೇನಹಳ್ಳಿ ಸೋಮಶೇಖರ್, ಕುಕ್ಕೂರುರಾಜು, ಹಿರಿಯೂರು ಸೋಮಣ್ಣ, ಕಿರಗಸೂರು ರಜನಿ, ವಾಟಾಳ್ ನಾಗರಾಜ್, ಕೃಷ್ಣಮೂರ್ತಿ, ಮನು, ಯರಗನಹಳ್ಳಿ ಸುರೇಶ್, ಆದಿಬೆಟ್ಟಹಳ್ಳಿಅರ್ಜುನ್, ಮಲ್ಲಯ್ಯ ,ಬನ್ನಹಳ್ಳಿಹುಂಡಿ ಉಮೇಶ್,ಸುಜ್ಜಲೂರುಶಿವಯ್ಯ, ಆಲಗೂಡು ನಾಗರಾಜ್, ರಘು,ದರ್ಶನ್,ರವಿ,ಬಿಲಗೆರೆಹುಂಡಿಸಿದ್ದರಾಜು, ಶಿವಕುಮಾರ್, ಕರೋಹಟ್ಟಿ ನಾಗೇಶ್, ಮಹದೇವಸ್ವಾಮಿ,ಯಡದೊರೆನಾರಾಯಣ, ಬೆಟ್ಟ ಹಳ್ಳಿ ದಕ್ಷಿಣಾಮೂರ್ತಿ,ಮಾವಿನಹಳ್ಳಿಕುಮಾರ್, ಲಿಂಗರಾಜು, ಇಂಡವಾಳು ಹೊನ್ನಯ್ಯ, ನಾಗರಾಜ್, ರಂಗಸಮುದ್ರ ರಂಗಸ್ವಾಮಿ, ನಂಜುಂಡ, ಮೂಗೂರು ರೇವಣ್ಣ , ಕೈಯಂಬಳ್ಳಿ ಕೃಷ್ಣ, ಗಿರಿಯ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

29 mins ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

34 mins ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

39 mins ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

46 mins ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

59 mins ago