ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು ಅವರನ್ನು ಶಾಸಕ ಸ್ಥಾನ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹ ಪಡಿಸಿದರು.
ತಿ.ನರಸೀಪುರ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾ ಸಂಚಾಲಕರಾದ ಆಲಗೂಡುಶಿ ವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುನಿರತ್ನ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಾನವ ಸರಪಳಿ ರಚಿಸಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.
ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಬನ್ನಹಳ್ಳಿ ಸೋಮಣ್ಣ, ತಾಲ್ಲೂಕು ಸಂಚಾಲಕರಾದ ಯಾಚೇನಹಳ್ಳಿ ಸೋಮಶೇಖರ್, ಕುಕ್ಕೂರುರಾಜು, ಹಿರಿಯೂರು ಸೋಮಣ್ಣ, ಕಿರಗಸೂರು ರಜನಿ, ವಾಟಾಳ್ ನಾಗರಾಜ್, ಕೃಷ್ಣಮೂರ್ತಿ, ಮನು, ಯರಗನಹಳ್ಳಿ ಸುರೇಶ್, ಆದಿಬೆಟ್ಟಹಳ್ಳಿಅರ್ಜುನ್, ಮಲ್ಲಯ್ಯ ,ಬನ್ನಹಳ್ಳಿಹುಂಡಿ ಉಮೇಶ್,ಸುಜ್ಜಲೂರುಶಿವಯ್ಯ, ಆಲಗೂಡು ನಾಗರಾಜ್, ರಘು,ದರ್ಶನ್,ರವಿ,ಬಿಲಗೆರೆಹುಂಡಿಸಿದ್ದರಾಜು, ಶಿವಕುಮಾರ್, ಕರೋಹಟ್ಟಿ ನಾಗೇಶ್, ಮಹದೇವಸ್ವಾಮಿ,ಯಡದೊರೆನಾರಾಯಣ, ಬೆಟ್ಟ ಹಳ್ಳಿ ದಕ್ಷಿಣಾಮೂರ್ತಿ,ಮಾವಿನಹಳ್ಳಿಕುಮಾರ್, ಲಿಂಗರಾಜು, ಇಂಡವಾಳು ಹೊನ್ನಯ್ಯ, ನಾಗರಾಜ್, ರಂಗಸಮುದ್ರ ರಂಗಸ್ವಾಮಿ, ನಂಜುಂಡ, ಮೂಗೂರು ರೇವಣ್ಣ , ಕೈಯಂಬಳ್ಳಿ ಕೃಷ್ಣ, ಗಿರಿಯ ಇದ್ದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…