ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು ಅವರನ್ನು ಶಾಸಕ ಸ್ಥಾನ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹ ಪಡಿಸಿದರು.
ತಿ.ನರಸೀಪುರ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾ ಸಂಚಾಲಕರಾದ ಆಲಗೂಡುಶಿ ವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುನಿರತ್ನ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಾನವ ಸರಪಳಿ ರಚಿಸಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.
ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಬನ್ನಹಳ್ಳಿ ಸೋಮಣ್ಣ, ತಾಲ್ಲೂಕು ಸಂಚಾಲಕರಾದ ಯಾಚೇನಹಳ್ಳಿ ಸೋಮಶೇಖರ್, ಕುಕ್ಕೂರುರಾಜು, ಹಿರಿಯೂರು ಸೋಮಣ್ಣ, ಕಿರಗಸೂರು ರಜನಿ, ವಾಟಾಳ್ ನಾಗರಾಜ್, ಕೃಷ್ಣಮೂರ್ತಿ, ಮನು, ಯರಗನಹಳ್ಳಿ ಸುರೇಶ್, ಆದಿಬೆಟ್ಟಹಳ್ಳಿಅರ್ಜುನ್, ಮಲ್ಲಯ್ಯ ,ಬನ್ನಹಳ್ಳಿಹುಂಡಿ ಉಮೇಶ್,ಸುಜ್ಜಲೂರುಶಿವಯ್ಯ, ಆಲಗೂಡು ನಾಗರಾಜ್, ರಘು,ದರ್ಶನ್,ರವಿ,ಬಿಲಗೆರೆಹುಂಡಿಸಿದ್ದರಾಜು, ಶಿವಕುಮಾರ್, ಕರೋಹಟ್ಟಿ ನಾಗೇಶ್, ಮಹದೇವಸ್ವಾಮಿ,ಯಡದೊರೆನಾರಾಯಣ, ಬೆಟ್ಟ ಹಳ್ಳಿ ದಕ್ಷಿಣಾಮೂರ್ತಿ,ಮಾವಿನಹಳ್ಳಿಕುಮಾರ್, ಲಿಂಗರಾಜು, ಇಂಡವಾಳು ಹೊನ್ನಯ್ಯ, ನಾಗರಾಜ್, ರಂಗಸಮುದ್ರ ರಂಗಸ್ವಾಮಿ, ನಂಜುಂಡ, ಮೂಗೂರು ರೇವಣ್ಣ , ಕೈಯಂಬಳ್ಳಿ ಕೃಷ್ಣ, ಗಿರಿಯ ಇದ್ದರು.
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…