ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು ಅವರನ್ನು ಶಾಸಕ ಸ್ಥಾನ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹ ಪಡಿಸಿದರು.
ತಿ.ನರಸೀಪುರ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾ ಸಂಚಾಲಕರಾದ ಆಲಗೂಡುಶಿ ವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುನಿರತ್ನ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಾನವ ಸರಪಳಿ ರಚಿಸಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.
ಪ್ರತಿಭಟನೆಯಲ್ಲಿ ಡಿಎಸ್ಎಸ್ ಸಂಚಾಲಕ ಬನ್ನಹಳ್ಳಿ ಸೋಮಣ್ಣ, ತಾಲ್ಲೂಕು ಸಂಚಾಲಕರಾದ ಯಾಚೇನಹಳ್ಳಿ ಸೋಮಶೇಖರ್, ಕುಕ್ಕೂರುರಾಜು, ಹಿರಿಯೂರು ಸೋಮಣ್ಣ, ಕಿರಗಸೂರು ರಜನಿ, ವಾಟಾಳ್ ನಾಗರಾಜ್, ಕೃಷ್ಣಮೂರ್ತಿ, ಮನು, ಯರಗನಹಳ್ಳಿ ಸುರೇಶ್, ಆದಿಬೆಟ್ಟಹಳ್ಳಿಅರ್ಜುನ್, ಮಲ್ಲಯ್ಯ ,ಬನ್ನಹಳ್ಳಿಹುಂಡಿ ಉಮೇಶ್,ಸುಜ್ಜಲೂರುಶಿವಯ್ಯ, ಆಲಗೂಡು ನಾಗರಾಜ್, ರಘು,ದರ್ಶನ್,ರವಿ,ಬಿಲಗೆರೆಹುಂಡಿಸಿದ್ದರಾಜು, ಶಿವಕುಮಾರ್, ಕರೋಹಟ್ಟಿ ನಾಗೇಶ್, ಮಹದೇವಸ್ವಾಮಿ,ಯಡದೊರೆನಾರಾಯಣ, ಬೆಟ್ಟ ಹಳ್ಳಿ ದಕ್ಷಿಣಾಮೂರ್ತಿ,ಮಾವಿನಹಳ್ಳಿಕುಮಾರ್, ಲಿಂಗರಾಜು, ಇಂಡವಾಳು ಹೊನ್ನಯ್ಯ, ನಾಗರಾಜ್, ರಂಗಸಮುದ್ರ ರಂಗಸ್ವಾಮಿ, ನಂಜುಂಡ, ಮೂಗೂರು ರೇವಣ್ಣ , ಕೈಯಂಬಳ್ಳಿ ಕೃಷ್ಣ, ಗಿರಿಯ ಇದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…