ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ.
ವರುಣ ಕ್ಷೇತ್ರದ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಇಂದು ಬೆಳಿಗ್ಗೆಯಿಂದಲೂ ಜೆಸಿಬಿಯು ಕೃಷಿ ಭೂಮಿ ಅಗೆಯುವ ಕಾರ್ಯದಲ್ಲಿ ತೊಡಗಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ರೈತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಸುಮಾರು 40-50 ವರ್ಷಗಳಿಂದ ಕೃಷಿ ಮಾಡುತ್ತ ಬಂದಿರುವ ರೈತರೆಲ್ಲಾ ಜಿಲ್ಲಾಡಳಿತದ ನಿರ್ಧಾರಕ್ಕೆ ರೊಚ್ಚಿಗೆದ್ದಿದ್ದರು. ಕೆಲಸ ಮಾಡುತ್ತಿದ್ದ ಜೆಸಿಬಿ ಮೇಲೆಯೇ ಏರಿದ ಅನ್ನದಾತರು ಯಾವುದೇ ಕಾರಣಕ್ಕೂ ಕೃಷಿ ಭೂಮಿ ಅಗೆಯಲು ಬಿಡಲ್ಲ ಎಂದು ಪಟ್ಟು ಹಿಡಿದಿದ್ದರು.
ಈ ಹಿನ್ನೆಲೆಯಲ್ಲಿ ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತವು ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…