ಮೈಸೂರು

ದೀಪಾಲಂಕಾರ ಮತ್ತು ಡ್ರೋನ್‌ ಶೋ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

* ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ

* ಸೆಸ್ಕ್‌ ಅಧಿಕಾರಿಗಳೊಂದಿಗೆ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ 

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ದಸರಾ ವಿದ್ಯುತ್‌ ದೀಪಾಲಂಕಾರ ಹಾಗೂ ಡ್ರೋನ್‌ ಶೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಸರಾ ಮಹೋತ್ಸವದ ವಿದ್ಯುತ್‌ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಈ ಬಾರಿ ಏರ್‌ ಶೋ ಸಹ ನಡೆಯಲಿದೆ. ಇದರ ನಡುವೆ ಡ್ರೋನ್‌ ಶೋ ನಡೆಸಬೇಕಿದೆ. ಅಲ್ಲದೆ, ಪಂಜಿನ ಕವಾಯತು ಕಾರ್ಯಕ್ರಮದ ತಾಲೀಮು ಸಹ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ಅಡಚಣೆ ಆಗದಂತೆ ಮೂರು ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಸುವುದು ಸೂಕ್ತವಾದ ದಿನಾಂಕವಾಗಿದೆ” ಎಂದರು.

“ಡ್ರೋನ್‌ ಶೋ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯನ್ನು ಎಂಡಿಎ ವತಿಯಿಂದ ಮಾಡಿಕೊಳ್ಳಬೇಕಿದೆ. ಇದರೊಂದಿಗೆ ಸಂಗೀತ ಸಂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಂಡಿಎ ವತಿಯಿಂದ ನಡೆಸಲು ಕ್ರಮವಹಿಸಬೇಕಿದೆ” ಎಂದು ತಿಳಿಸಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು, ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ವೃತ್ತ, ರಸ್ತೆಗಳು ಹಾಗೂ ಇನ್ನಿತರ ಸ್ಥಳಗಳಲ್ಲಿ ಮಾಡಲಾಗುವ ದಸರಾ ದೀಪಾಲಂಕಾರದ ವಿನ್ಯಾಸ, ವಿವಿಧ ಬಗೆಯ ಕಲಾಕೃತಿಗಳನ್ನು ನಿರ್ಮಿಸಿರುವ ಕುರಿತಂತೆ ಮಾಹಿತಿ ನೀಡಿದರು.

“ಸೆ.28 ಮತ್ತು 29ರಂದು ನಡೆಯುವ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ಹಾಗೂ ಅ.1 ಮತ್ತು 2ರಂದು ಡ್ರೋನ್‌ ಶೋ ಪ್ರಮುಖ ಪ್ರದರ್ಶನ ನಡೆಯಲಿದೆ. ಡ್ರೋನ್‌ ಶೋ ಜತೆಗೆ ಖ್ಯಾತ ಗಾಯಕರಿಂದ ಸಂಗೀತ ಸಂಜೆ ನಡೆಸಲು ಚಿಂತನೆ ನಡೆಸಲಾಗಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಎಂಡಿಎ ಆಯುಕ್ತ ರಕ್ಷಿತ್‌, ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಪ್ರಧಾನ ವ್ಯವಸ್ಥಾಪಕ ಎಲ್‌. ಲೋಕೇಶ್‌ ಸೇರಿದಂತೆ ಪ್ರಮುಖ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

15 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 hour ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

3 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago