ಮೈಸೂರು

ದೀಪಾಲಂಕಾರ ಮತ್ತು ಡ್ರೋನ್‌ ಶೋ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

* ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ

* ಸೆಸ್ಕ್‌ ಅಧಿಕಾರಿಗಳೊಂದಿಗೆ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ 

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ದಸರಾ ವಿದ್ಯುತ್‌ ದೀಪಾಲಂಕಾರ ಹಾಗೂ ಡ್ರೋನ್‌ ಶೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಸರಾ ಮಹೋತ್ಸವದ ವಿದ್ಯುತ್‌ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಈ ಬಾರಿ ಏರ್‌ ಶೋ ಸಹ ನಡೆಯಲಿದೆ. ಇದರ ನಡುವೆ ಡ್ರೋನ್‌ ಶೋ ನಡೆಸಬೇಕಿದೆ. ಅಲ್ಲದೆ, ಪಂಜಿನ ಕವಾಯತು ಕಾರ್ಯಕ್ರಮದ ತಾಲೀಮು ಸಹ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ಅಡಚಣೆ ಆಗದಂತೆ ಮೂರು ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಸುವುದು ಸೂಕ್ತವಾದ ದಿನಾಂಕವಾಗಿದೆ” ಎಂದರು.

“ಡ್ರೋನ್‌ ಶೋ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯನ್ನು ಎಂಡಿಎ ವತಿಯಿಂದ ಮಾಡಿಕೊಳ್ಳಬೇಕಿದೆ. ಇದರೊಂದಿಗೆ ಸಂಗೀತ ಸಂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಂಡಿಎ ವತಿಯಿಂದ ನಡೆಸಲು ಕ್ರಮವಹಿಸಬೇಕಿದೆ” ಎಂದು ತಿಳಿಸಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು, ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ವೃತ್ತ, ರಸ್ತೆಗಳು ಹಾಗೂ ಇನ್ನಿತರ ಸ್ಥಳಗಳಲ್ಲಿ ಮಾಡಲಾಗುವ ದಸರಾ ದೀಪಾಲಂಕಾರದ ವಿನ್ಯಾಸ, ವಿವಿಧ ಬಗೆಯ ಕಲಾಕೃತಿಗಳನ್ನು ನಿರ್ಮಿಸಿರುವ ಕುರಿತಂತೆ ಮಾಹಿತಿ ನೀಡಿದರು.

“ಸೆ.28 ಮತ್ತು 29ರಂದು ನಡೆಯುವ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ಹಾಗೂ ಅ.1 ಮತ್ತು 2ರಂದು ಡ್ರೋನ್‌ ಶೋ ಪ್ರಮುಖ ಪ್ರದರ್ಶನ ನಡೆಯಲಿದೆ. ಡ್ರೋನ್‌ ಶೋ ಜತೆಗೆ ಖ್ಯಾತ ಗಾಯಕರಿಂದ ಸಂಗೀತ ಸಂಜೆ ನಡೆಸಲು ಚಿಂತನೆ ನಡೆಸಲಾಗಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಎಂಡಿಎ ಆಯುಕ್ತ ರಕ್ಷಿತ್‌, ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಪ್ರಧಾನ ವ್ಯವಸ್ಥಾಪಕ ಎಲ್‌. ಲೋಕೇಶ್‌ ಸೇರಿದಂತೆ ಪ್ರಮುಖ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

11 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

12 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

16 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago