* ಸೆ.28 ಮತ್ತು 29ರಂದು ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನ
* ಸೆಸ್ಕ್ ಅಧಿಕಾರಿಗಳೊಂದಿಗೆ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ದಸರಾ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಶೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
“ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಈ ಬಾರಿ ಏರ್ ಶೋ ಸಹ ನಡೆಯಲಿದೆ. ಇದರ ನಡುವೆ ಡ್ರೋನ್ ಶೋ ನಡೆಸಬೇಕಿದೆ. ಅಲ್ಲದೆ, ಪಂಜಿನ ಕವಾಯತು ಕಾರ್ಯಕ್ರಮದ ತಾಲೀಮು ಸಹ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ಅಡಚಣೆ ಆಗದಂತೆ ಮೂರು ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೆ.28 ಮತ್ತು 29ರಂದು ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನ ನಡೆಸುವುದು ಸೂಕ್ತವಾದ ದಿನಾಂಕವಾಗಿದೆ” ಎಂದರು.
“ಡ್ರೋನ್ ಶೋ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯನ್ನು ಎಂಡಿಎ ವತಿಯಿಂದ ಮಾಡಿಕೊಳ್ಳಬೇಕಿದೆ. ಇದರೊಂದಿಗೆ ಸಂಗೀತ ಸಂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಂಡಿಎ ವತಿಯಿಂದ ನಡೆಸಲು ಕ್ರಮವಹಿಸಬೇಕಿದೆ” ಎಂದು ತಿಳಿಸಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು, ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ವೃತ್ತ, ರಸ್ತೆಗಳು ಹಾಗೂ ಇನ್ನಿತರ ಸ್ಥಳಗಳಲ್ಲಿ ಮಾಡಲಾಗುವ ದಸರಾ ದೀಪಾಲಂಕಾರದ ವಿನ್ಯಾಸ, ವಿವಿಧ ಬಗೆಯ ಕಲಾಕೃತಿಗಳನ್ನು ನಿರ್ಮಿಸಿರುವ ಕುರಿತಂತೆ ಮಾಹಿತಿ ನೀಡಿದರು.
“ಸೆ.28 ಮತ್ತು 29ರಂದು ನಡೆಯುವ ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನ ಹಾಗೂ ಅ.1 ಮತ್ತು 2ರಂದು ಡ್ರೋನ್ ಶೋ ಪ್ರಮುಖ ಪ್ರದರ್ಶನ ನಡೆಯಲಿದೆ. ಡ್ರೋನ್ ಶೋ ಜತೆಗೆ ಖ್ಯಾತ ಗಾಯಕರಿಂದ ಸಂಗೀತ ಸಂಜೆ ನಡೆಸಲು ಚಿಂತನೆ ನಡೆಸಲಾಗಿದೆ” ಎಂದು ತಿಳಿಸಿದರು.
ಸಭೆಯಲ್ಲಿ ಎಂಡಿಎ ಆಯುಕ್ತ ರಕ್ಷಿತ್, ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್, ಪ್ರಧಾನ ವ್ಯವಸ್ಥಾಪಕ ಎಲ್. ಲೋಕೇಶ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಇದ್ದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…