ಮೈಸೂರು

ತಲಕಾಡಿಗೆ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ

ಮೈಸೂರು/ಟಿ.ನರಸೀಫುರ:  ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಭಾನುವಾರ ಸಂಜೆ(ಮೇ.27)  ಪ್ರಸಿದ್ದ ಪ್ರವಾಸಿ ತಾಣ ತಲಕಾಡಿಗೆ ದಿಢೀರ್ ಭೇಟಿ ನೀಡಿ,  ಇಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಶೀಲಿಸಿದರು.

ಮುಡುಕುತೊರೆ ಬೆಟ್ಟದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದ ನಂತರ ಹಳೇತಲಕಾಡು ಅರಣ್ಯ ನಿಸರ್ಗಧಾಮ ನದಿ ತೀರ ಹಾಗೂ ಪಂಚಲಿಂಗ ಪ್ರಧಾನ ಶ್ರೀ ವೈದ್ಯನಾಥೇಶ್ವರ ಸ್ವಾಮಿಯ ದರ್ಶನ ಪಡೆದರು.

ತಲಕಾಡು ಗ್ರಾಮದ ಸಮ್ಯಸೆಗಳ ಬಗ್ಗೆ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿ ಅಲ್ಲಿನ ಗ್ರಾಮ ಅಭಿವೃದ್ಧಿ ಅಧಿಕಾರಿಗೆ  ಸಲಹೆ, ಸೂಚನೆ ನೀಡಿದರು.

ತಲಕಾಡು ಗ್ರಾಮಠಾಣೆ ವಿಸ್ತರಣೆಗೆ ಜಿಲ್ಲಾಧಿಕಾರಿಗಳಿಗೆ ಪಂಚಾಯಿತಿ ಮನವಿ ಪತ್ರ ಸಲ್ಲಿಸಿತು. ಗ್ರಾಮಠಾಣೆ ವಿಸ್ತರಣೆ ಅಗತ್ಯತೆ ಕುರಿತು ತಲಕಾಡು ಸ್ವಗ್ರಾಮಸ್ಥರು ಹಾಗೂ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರು, ನಿನ್ನೆಯಷ್ಟೇ ಜಿಲ್ಲಾಧಿಕಾರಿ ಛೇಂಬರ್ ಗೆ ಭೇಟಿ ನೀಡಿ, ಈ ಕುರಿತು ಸಲಹೆ ಮಾರ್ಗದರ್ಶನ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನೂತನ ರಸ್ತೆಗೆ ಭೂಮಿ ಖರೀಧಿ;

ಇಲ್ಲಿನ ಆಶ್ರಯಬಡಾವಣೆಗೆ ನೂತನ  ಸಂಪರ್ಕ ರಸ್ತೆ ಅಸ್ತಿತ್ವಕ್ಕೆ ತರಲು 10ಗುಂಟೆ ಖಾಸಗಿ ಭೂಮಿ ಖರೀಧಿಗೆ ಪಂಚಾಯಿತಿ ಮತ್ತು ಸ್ಥಳೀಯರಿಂದ ಶೇ.50 ರಷ್ಟು ವಂತಿಗೆ ಸಂಗ್ರಹಿಸಿ ಕೊಡಲು ಮುಂದಾದರೆ ಯಾವುದಾದರು ನಿಗಮದಿಂದ ಬಾಕಿ ಮೊತ್ತ ಭರಿಸಿಕೊಡಲು ಅಗತ್ಯ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಪಂಚಾಯಿತಿಗೆ ಭರವಸೆ ನೀಡಿದರು.

ಬುಧವಾರ ಸಭೆ ಆಯೋಜನೆ;

ಇಲ್ಲಿ ನಡೆಸಿದ ಪರಿಶೀಲನೆಯಲ್ಲಿ ಕಂಡು ಬಂದ ಪ್ರಮುಖ ವಾಸ್ತವತೆಯ ವಿವರಗಳನ್ನು ವಿವರಿಸಿದ ಜಿಲ್ಲಾಧಿಕಾರಿಗಳು. 25ಎಕರೆ ಅರಣ್ಯ ಇಲಾಖೆಯ ಸುಪರ್ಧಿನಲ್ಲಿರುವ ಜಾಗದ ಪೋಡಿ ದುರಸ್ತಿ ನೆರವೇರಿಸಿ ಸಂಬಂಧಪಟ್ಟವರಿಗೆ ಹಸ್ತಾಂತರ, ಗ್ರಾಮಾರಣ್ಯ ಸಮಿತಿ ಪುನರ್ ರಚನೆ, ಕಸ ಸಂಗ್ರಹಣೆ, ಕುಡಿಯುವ ನೀರಿನ ವ್ಯವಸ್ಥೆ
ಪ್ರವಾಸಿಗರಿಗೆ ಅಧೀಕೃತವಾಗಿ ಲೈಪ್ ಜಾಕೆಟ್ ಸಮೇತ ಹರಿಗೋಲು ನಡೆಸಲು ಅನುಮತಿ, ಮಕ್ಕಳು ಆಟವಾಡಲು, ಪ್ರವಾಸಿಗರು ವಿಶ್ರಮಿಸಿಕೊಳ್ಳಲು, ಮಹಿಳೆಯರ ವಸ್ತ್ರ ಬದಲಾವಣೆ ಕೊಠಡಿಗಳು, ನದಿ ದಂಡೆಯಲ್ಲಿ ವಾಚ್ ಟವರ್ ಸ್ಥಾಪನೆ, ಸೇರಿದಂತೆ ಅರಣ್ಯ ನಿಸರ್ಗಧಾಮದಲ್ಲಿ ಆಯಾ ಚಟುವಟಿಕೆಗಳಿಗೆ ಪ್ರತ್ಯೇಕ ವೆಂಡಿಂಗ್ ಝೋನ್ ಸ್ಥಾಪನೆ, ನನೆಗುದಿಯಲ್ಲಿರುವ ಹಳೇತಲಕಾಡು ರಸ್ತೆ ವಿಸ್ತರಣೆ, ತಲಕಾಡಿಗೆ ಸೂಕ್ತ ಬಸ್ ಸಾರಿಗೆ ವ್ಯವಸ್ಥೆ ಸಂಬಂಧಪಟ್ಟಂತೆ ಸೂಕ್ತ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಬುಧವಾರ ಸಂಜೆ 5ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಿತ ಅಧಿಕಾರಿಗಳ ಜತೆ ಸಭೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.

ಡಿಜೆ ಸೌಂಡ್ ಸ್ಥಗಿತಕ್ಕೆ ಆಗ್ರಹ

ಮುಡುಕುತೊರೆ ನದಿಯಾಚೆದಡದ ಜಲಧಾಮ ರೆಸಾರ್ಟ್ ನವರು ರಾತ್ರಿವೇಳೆ ಡಿ.ಜೆ ಸೌಂಡ್ ಮ್ಯೂಸಿಕ್ ಹಾಕಿ ತಡರಾತ್ರಿವರೆಗೂ ಶಬ್ದಮಾಲಿನ್ಯ ಉಂಟು ಮಾಡುತ್ತಿದ್ದಾರೆ. ಇದರಿಂದ ಬೆಟ್ಟದ ಎತ್ತರದ ತಪ್ಪಲಿನಲ್ಲಿ ವಾಸವಾಗಿರುವ ಟಿ.ಬೆಟ್ಟಹಳ್ಳಿ ಮುಡುಕುತೊರೆ ನಿವಾಸಿಗಳ ನಿದ್ರಾಭಂಗವಾಗುತ್ತಿದೆ ಎಂದು ವಿಡಿಯೋ ಸಮೇತ ಟಿ.ಬೆಟ್ಟಹಳ್ಳಿ ಗ್ರಾಮದ ಮುಖಂಡ ಶಾಂತರಾಜು ಡಿಸಿಗೆ ತೋರಿಸಿದರು, ಈ ಕುರಿತು ಲಿಖಿತ ರೂಪದಲ್ಲಿ ದೂರು ಸಲ್ಲಿಸುವಂತೆ ದೂರುದಾರರಿಗೆ ಡಿಸಿ ತಿಳಿಸಿದರು.

ಈ ವೇಳೆ ಪಂಚಾಯಿತಿ ಪಿಡಿಒ ಮಹೇಶ್, ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ನರಸಿಂಹ ಮಾದನಾಯಕ, ಪಂಚಾಯಿತಿ ಹಾಗು ಕಂದಾಯ ಇಲಾಖೆ ಸಿಬ್ಬಂದಿ ಗ್ರಾಮದ ಇತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

37 mins ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

5 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

5 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

5 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

5 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

8 hours ago