ಮೈಸೂರು

ಮೈಸೂರು | ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಭರವಸೆ

ಮೈಸೂರು : ರೈತರ ಜಮೀನಿನಲ್ಲಿ ಹಾದು ಹೋಗುವ ಹೈಟೆನ್ಷನ್ ವಿದ್ಯುತ್ ತಂತಿ ಅಳವಡಿಕೆ ಸಂಬಂಧ ಉಂಟಾಗಿರುವ ಸಮಸ್ಯೆಗೆ ಪರಿಹಾರ ಹುಡುಕಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು, ರೈತ ಪ್ರಮುಖರ ಸಭೆ ನಡೆಸಿ ಮಾತನಾಡಿದರು.

ರೈತರು ಹೇಳಿರುವ ಎಲ್ಲಾ ಸಮಸ್ಯೆಗಳು, ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಪರ್ಯಾಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದರು.

ರೈತ ಮುಖಂಡ ಮಂಜು ಕಿರಣ್ ಮಾತನಾಡಿ, ಅವೈಜ್ಞಾನಿಕವಾಗಿ ಹೈಟೆನ್ಷನ್ ವೈರ್ ಅಳವಡಿಸಲು ರೈತರ ವಿರೋಧವಿದೆ. ರೈತರಿಗೆ ಯೋಜನೆಯ ನೀಲನಕ್ಷೆ ಕೊಡಬೇಕು. ಯೋಜನೆಯ ಪ್ರಕಾರ ಎಷ್ಟು ಕಿ.ಮೀ ವಿದ್ಯುತ್ ತಂತಿ ಹಾದು ಹೋಗುತ್ತದೆ. ಯಾವ ರೈತರ ಭೂಮಿಯಲ್ಲಿ ಕಂಬವನ್ನು ಅಳವಡಿಸಲು ಉದ್ದೇಶಿಸಲಾಗಿದೆ. ವಿದ್ಯುತ್ ತಂತಿ ಹಾದು ಹೋಗುವ ರೈತರಿಗೆ ಮತ್ತು ಈ ಯೋಜನೆಯ ನಿರ್ವಹಣೆಗಾಗಿ ಗುರುತು ಮಾಡುವ ಭೂಮಿಯ ರೈತರಿಗೆ ಅಧಿಕೃತವಾದ ಪತ್ರದ ಮೂಲಕ ಸೂಚನೆ ಕೊಡಲಾಗಿದೆಯೇ ಎಂದು ಪ್ರಶ್ನಿಸಿದರು.

ಗ್ರಾಮವಾರು ಸಭೆಗಳನ್ನು ಕರೆದು ರೈತರೊಂದಿಗೆ ಚರ್ಚಿಸಿಲ್ಲ. ರೈತರ ಗಮನಕ್ಕೆ ತಾರದೇ ಏಕಾಏಕೀ ಹೈಟೆನ್ಷನ್ ಮಾರ್ಗ ಅಳವಡಿಸಲು ಅವಕಾಶ ಕೊಡಲ್ಲ ಎಂದರು. ಅದೇ ರೀತಿ ಅನೇಕ ರೈತರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಎಲ್ಲರ ಅಭಿಪ್ರಾಯ ಆಲಿಸಿದ ಜಿಲ್ಲಾಧಿಕಾರಿ, ನಾವೆಲ್ಲರೂ ರೈತರ ಮಕ್ಕಳೇ ಆಗಿದ್ದೇವೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಕರ್ತವ್ಯ. ಪರ್ಯಾಯ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಡಿವೈಎಸ್‌ಪಿ ಗೋಪಾಲಕೃಷ್ಣ, ಮೈಸೂರು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಡಾ.ಎಂ.ಎಲ್.ಶೇಖರ್, ರೈತ ಮುಖಂಡರಾದ ಸಿಂಧುವಳ್ಳಿ ಜಬ್ಬಾರ್, ನಾಗೇಂದ್ರ, ಸಿದ್ದರಾಮ, ಕರಿಯಪ್ಪ, ಅನಿಲ್, ಭೈರೇಗೌಡ, ಚಂದ್ರು, ಶಿವರಾಜು, ಗಿರೀಶ್, ಭಾಸ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

23 mins ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

46 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

1 hour ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

2 hours ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

3 hours ago