ಮೈಸೂರು

ನಾಲೆ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ತಿ.ನರಸೀಪುರ : ನೆನ್ನೆ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನ ಯಾಚೇನಹಳ್ಳಿ ಗ್ರಾಮದ ಸಮೀಪದಲ್ಲಿ ಸಿಡಿಎಸ್ ನಾಲೆ ಕುಸಿತ ಕಂಡಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಭೇಟಿ ಸ್ಥಳ ಪರಿಶೀಲನೆ ನಡೆಸಿದರು.
ಯಾಚೇನಹಳ್ಳಿ ಗ್ರಾಮದ ಅನತಿ ದೂರದಲ್ಲಿ ನಾಲೆಯು ಹೊಡೆದು ಹೋಗಿದ್ದು,ನಾಲೆಯ ಬದಿಯ ಜಮೀನುಗಳಲ್ಲಿ ಬೆಳೆದಿದ್ದ ಭತ್ತ ಬೆಳೆಯುವ ಸಂಪೂರ್ಣ ನಾಶವಾಗಿದೆ. ನಾಲೆಯ ದುರಸ್ತಿ ಕೆಲಸ ಪ್ರಗತಿಯಲ್ಲಿದ್ದು, ಬಿದ್ದಿರುವ ಕೋಡಿಯನ್ನು ತಡೆಯಲು ಸಾಧ್ಯವಾಗಿಲ್ಲ.ನಾಲೆ ಕೋಡಿ ದೊಡ್ಡದಾಗಿ ಬಿದ್ದಿರುವುದರಿಂದ ನಾಲಾ ಕೇಳಬದಿಯಲ್ಲಿರುವ ಸರಿ ಸುಮಾರು 200ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆಯು ಸಂಪೂರ್ಣ ನೆಲಕಚ್ಚಿದೆ.

ಸ್ಥಳ ಪರಿಶೀಲಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು,ಸ್ಥಳೀಯ ಶಾಸಕರು ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ ಆಗಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿದ್ದು,ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ದುರಸ್ತಿ ಕೆಲಸ ಪ್ರಗತಿಯಲ್ಲಿದೆ.
ನೆನ್ನೆಯ ಮಳೆಯಿಂದ ಯಾಚೇನೇಹಳ್ಳಿ ಮತ್ತು ಹನುಮನಾಳು ಗ್ರಾಮಗಳಲ್ಲಿ ಸುಮಾರು 250 ಎಕರೆ ಬೆಳೆ ನಾಶ ಆಗಿರಬಹುದು ಎಂದು ಕೃಷಿ ಇಲಾಖೆಯು ಅಂದಾಜಿಸಿದೆ.ವರದಿ ಬಂದ ನಂತರ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು

ಜಿಲ್ಲಾಧಿಕಾರಿಗಳ ಜೊತೆ ಸ್ಥಳ ಪರಿಶೀಲನೆಯಲ್ಲಿ ಭಾಗಿಯಾಗಿದ್ದ ಶಾಸಕರು ಮಾತನಾಡಿ,ಕಳೆದ ಬಾರಿ ಅತಿವೃಷ್ಟಿಯಿಂದ ಆದ ತೊಂದರೆ ಬಹಳ ಕಡಿಮೆ.ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ ನಾಲೆಗಳಲ್ಲಿ ಹೆಚ್ಚು ನೀರು ಹರಿಯುತ್ತಿದೆ. ಹಾಗಾಗಿ ನಾಲೆಗಳು ತುಂಬಿ ಹರಿಯುತ್ತಿರುವುದರಿಂದ ಅಲ್ಲಲ್ಲಿ ನಾಲೆಗಳು ತೊಂದರೆಗೊಳಗಾಗುತ್ತಿದೆ.ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು,ಆದಷ್ಟು ಬೇಗ ತೊಂದರೆಯನ್ನು ಸರಿಪಡಿಸಲಾಗುವುದು ತೊಂದರೆಗೊಳಗಾದ ಸಂತ್ರಸ್ಥರಿಗೆ ಪರಿಹಾರ ಸಿಗಲು ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ.ಕಾರ್ಯನಿರ್ವಾಹಣಾಧಿಕಾರಿ ಪೂರ್ಣಿಮ, ತಹಸೀಲ್ದಾರ್ ಸಿ.ಜಿ. ಗೀತಾ,ನೀರಾವರಿ ಇಲಾಖೆ ಎಇಇ ಶಿವಮಾಧವನ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಶಿಕಲಾ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ,ಜೆಇ ಪ್ರದೀಪ್,ಸ್ಥಳೀಯ ಜೆಡಿಎಸ್ ಮುಖಂಡ ಜೆಡಿಎಸ್ ಕಾರ್ಯಾಧ್ಯಕ್ಷ ಬಿ.ಆರ್ .ಮಂಜುನಾಥ್ , ಬನ್ನೂರು ಕುಮಾರ್ ,ಗ್ರಾಪಂ ಸದಸ್ಯ ಹೋಟೆಲ್ ರಾಮಸ್ವಾಮಿ,ಚೇತನಶಟ್ಟಿ, ರೈತರು, ಗ್ರಾಮಸ್ಥರು ಹಾಜರಿದ್ದರು.

 

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

9 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

10 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

10 hours ago