ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಭಾಗಿ
ಮೈಸೂರು : ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು.
ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು ನಡೆದ ಕಾರ್ಯಕ್ರಮಕ್ಕೆಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು. ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತ್ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಕೆ.ಸವಿತ,ಕೌನ್ಸಿಲ್ ಕಾರ್ಯದರ್ಶಿ ರಂಗಸ್ವಾಮಿ ಇನ್ನಿತರರು ಹಾಜರಿದ್ದರು.
ಜಿಲ್ಲಾಧಿಕಾರಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಿಂಗಳು ಕಾಲ ನಡೆಯಲಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುವಾಗ ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ, ಬದಲಾವಣೆ ಸೇರಿದಂತೆ ಇನ್ನಿತರ ಅಂಶಗಳನ್ನು ಸರಿಪಡಿಸಲಾಗುತ್ತದೆ.ರಾಜಕೀಯ ಪಕ್ಷಗಳ ನಾಯಕರ ಸಭೆ ಕರೆದು ಚರ್ಚಿಸಲಾಗುತ್ತದೆ. ನಾಲ್ಕು ದಿನಗಳ ಕಾಲ ಮಿಂಚಿನ ನೋಂದಣಿ ನಡೆಯಲಿದೆ. ಮತದಾರರ ಅಂತಿಮ ಮತದಾರರ ಪಟ್ಟಿ ಜನವರಿ ಐದರಂದು ಪ್ರಕಟವಾಗಲಿದೆ. ಸಮಸ್ಯೆ ಇಲ್ಲದಂತೆ ಮತ್ತು ಗೊಂದಲ ಇಲ್ಲದಂತೆ ಕರಡು ಪ್ರತಿಯನ್ನು ಪ್ರಕಟಿಸಿದಾಗ ಗಮನಿಸಿಕೊಳ್ಳಲು ಅವಕಾಶಗಳನ್ನು ನೀಡಲಾಗಿದೆ ಎಂದರು. ಪ್ರತಿಯೊಬ್ಬ ಮತದಾರರು ತಮ್ಮಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ರಾಯಭಾರಿಯಾಗಿ ಮಾಡಿಕೊಂಡು ನೂರು ಮಂದಿಗೆ ಪ್ರಚಾರ ಮಾಡುವಂತೆ ಬಳಸಿಕೊಳ್ಳುವ ಕೆಲಸ ಮಾಡಲಾಗುವುದು ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…